ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮುದ್ರ ದೋಣಿಯೊಂದು ಸೋಮ ವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಭಟ್ಕಳದ ನೇತ್ರಾಣಿ ಸಮೀಪದಲ್ಲಿ ಬಂಡೆಗೆ ಬಡಿದು ಮುಳುಗಡೆಗೊಂಡಿದೆ. ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ಸಮೀಪ ದಲ್ಲಿದ್ದ ಬೋಟಿನವರು ರಕ್ಷಿಸಿದ್ದಾರೆ.
ಉದ್ಯಾವರ ಸಂಪಿಗೆನಗರದ ರಾಹಿಲ್ ಅವರಿಗೆ ಸೇರಿದ ಸೀ ಬರ್ಡ್ ಬೋಟ್ ಮೇ 21ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಮೇ 22ರಂದು ಬೆಳಗ್ಗೆ ಭಟ್ಕಳ ನೇತ್ರಾಣಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಗಾಳಿ-ಮಳೆ ಆರಂಭವಾಗಿದ್ದು, ಪರಿಣಾಮ ನಾವಿಕನ ನಿಯಂತ್ರಣ ತಪ್ಪಿ ಕಲ್ಲು ಬಂಡೆಗೆ ಬಡಿಯಿತು. ಈ ವೇಳೆ ನೀರು ಒಳಗೆ ತುಂಬಿ ಬೋಟ್ ಮುಳುಗಲಾರಂಭಿಸಿತ್ತು.
ಸಮೀಪದಲ್ಲಿದ್ದ ಪವನ ಪುತ್ರ 111 ಬೋಟಿನವರು ಧಾವಿಸಿ ಬಂದು ಈ ಬೋಟನ್ನು ಹಗ್ಗದ ಸಹಾಯದಿಂದ ಎಳೆದು ತರಲು ಪ್ರಯತ್ನ ಪಟ್ಟರು. ಆಗ ಹಗ್ಗ ತುಂಡಾಗಿ ಬೋಟು ಸಂಪೂರ್ಣ ಮುಳುಗಡೆಗೊಂಡಿತು.
ಬೋಟಿನಲ್ಲಿದ್ದ ಏಳೂ ಮಂದಿಯನ್ನು ರಕ್ಷಿಸಿ ಮಲ್ಪೆ ಬಂದರಿಗೆ ಕರೆ ತರಲಾಗಿದೆ. ಸುಮಾರು 45 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…