ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮುದ್ರ ದೋಣಿಯೊಂದು ಸೋಮ ವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಭಟ್ಕಳದ ನೇತ್ರಾಣಿ ಸಮೀಪದಲ್ಲಿ ಬಂಡೆಗೆ ಬಡಿದು ಮುಳುಗಡೆಗೊಂಡಿದೆ. ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ಸಮೀಪ ದಲ್ಲಿದ್ದ ಬೋಟಿನವರು ರಕ್ಷಿಸಿದ್ದಾರೆ.
ಉದ್ಯಾವರ ಸಂಪಿಗೆನಗರದ ರಾಹಿಲ್ ಅವರಿಗೆ ಸೇರಿದ ಸೀ ಬರ್ಡ್ ಬೋಟ್ ಮೇ 21ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಮೇ 22ರಂದು ಬೆಳಗ್ಗೆ ಭಟ್ಕಳ ನೇತ್ರಾಣಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಗಾಳಿ-ಮಳೆ ಆರಂಭವಾಗಿದ್ದು, ಪರಿಣಾಮ ನಾವಿಕನ ನಿಯಂತ್ರಣ ತಪ್ಪಿ ಕಲ್ಲು ಬಂಡೆಗೆ ಬಡಿಯಿತು. ಈ ವೇಳೆ ನೀರು ಒಳಗೆ ತುಂಬಿ ಬೋಟ್ ಮುಳುಗಲಾರಂಭಿಸಿತ್ತು.
ಸಮೀಪದಲ್ಲಿದ್ದ ಪವನ ಪುತ್ರ 111 ಬೋಟಿನವರು ಧಾವಿಸಿ ಬಂದು ಈ ಬೋಟನ್ನು ಹಗ್ಗದ ಸಹಾಯದಿಂದ ಎಳೆದು ತರಲು ಪ್ರಯತ್ನ ಪಟ್ಟರು. ಆಗ ಹಗ್ಗ ತುಂಡಾಗಿ ಬೋಟು ಸಂಪೂರ್ಣ ಮುಳುಗಡೆಗೊಂಡಿತು.
ಬೋಟಿನಲ್ಲಿದ್ದ ಏಳೂ ಮಂದಿಯನ್ನು ರಕ್ಷಿಸಿ ಮಲ್ಪೆ ಬಂದರಿಗೆ ಕರೆ ತರಲಾಗಿದೆ. ಸುಮಾರು 45 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…