ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮುದ್ರ ದೋಣಿಯೊಂದು ಸೋಮ ವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಭಟ್ಕಳದ ನೇತ್ರಾಣಿ ಸಮೀಪದಲ್ಲಿ ಬಂಡೆಗೆ ಬಡಿದು ಮುಳುಗಡೆಗೊಂಡಿದೆ. ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ಸಮೀಪ ದಲ್ಲಿದ್ದ ಬೋಟಿನವರು ರಕ್ಷಿಸಿದ್ದಾರೆ.
ಉದ್ಯಾವರ ಸಂಪಿಗೆನಗರದ ರಾಹಿಲ್ ಅವರಿಗೆ ಸೇರಿದ ಸೀ ಬರ್ಡ್ ಬೋಟ್ ಮೇ 21ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಮೇ 22ರಂದು ಬೆಳಗ್ಗೆ ಭಟ್ಕಳ ನೇತ್ರಾಣಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಗಾಳಿ-ಮಳೆ ಆರಂಭವಾಗಿದ್ದು, ಪರಿಣಾಮ ನಾವಿಕನ ನಿಯಂತ್ರಣ ತಪ್ಪಿ ಕಲ್ಲು ಬಂಡೆಗೆ ಬಡಿಯಿತು. ಈ ವೇಳೆ ನೀರು ಒಳಗೆ ತುಂಬಿ ಬೋಟ್ ಮುಳುಗಲಾರಂಭಿಸಿತ್ತು.
ಸಮೀಪದಲ್ಲಿದ್ದ ಪವನ ಪುತ್ರ 111 ಬೋಟಿನವರು ಧಾವಿಸಿ ಬಂದು ಈ ಬೋಟನ್ನು ಹಗ್ಗದ ಸಹಾಯದಿಂದ ಎಳೆದು ತರಲು ಪ್ರಯತ್ನ ಪಟ್ಟರು. ಆಗ ಹಗ್ಗ ತುಂಡಾಗಿ ಬೋಟು ಸಂಪೂರ್ಣ ಮುಳುಗಡೆಗೊಂಡಿತು.
ಬೋಟಿನಲ್ಲಿದ್ದ ಏಳೂ ಮಂದಿಯನ್ನು ರಕ್ಷಿಸಿ ಮಲ್ಪೆ ಬಂದರಿಗೆ ಕರೆ ತರಲಾಗಿದೆ. ಸುಮಾರು 45 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…