ಮಲ್ಪೆ: ಮ್ಯಾಂಡಸ್ ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ನೀಡಿರುವ ಮುನ್ನೆಚ್ಚರಿಕೆಯ ಅನುಸಾರ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹೆಚ್ಚಿನ ದೋಣಿಗಳೂ ತಟದತ್ತ ಧಾವಿಸಿವೆ.
ಮೂರ್ನಾಲ್ಕು ದಿನದ ಹಿಂದೆ ಉತ್ತರ ದಿಕ್ಕಿಗೆ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಮೀನುಗಾರರಿಗೆ ಯಾವ ಸಮಸ್ಯೆಯೂ ಎದುರಾಗಿಲ್ಲವಾದರೂ ದಕ್ಷಿಣದತ್ತ ಸಾಗಿದ ಬೋಟುಗಳು ಗಾಳಿಯ ಒತ್ತಡದಿಂದಾಗಿ ಮೀನುಗಾರಿಕೆ ನಡೆಸಲಾಗದೆ ಸಮೀಪದ ಬಂದರು ಪ್ರವೇಶಿಸಿವೆ.
ಇದೀಗ ಉತ್ತರದ ಕಡೆಯಲ್ಲೂ ಆಳಸಮುದ್ರದಲ್ಲಿ ಚಂಡಮಾರುತ ಪ್ರಭಾವ ಕಾಣಿಸಿಕೊಂಡಿದ್ದು ಅತ್ತ ತೆರಳಿದ್ದ ಆಳಸಮುದ್ರ ಬೋಟುಗಳ ಪೈಕಿ ಕೆಲವು ಸಮುದ್ರ ಮಧ್ಯೆ ಲಂಗರು ಹಾಕಿ ನಿಂತರೆ, ಇನ್ನು ಕೆಲವು ಸಮೀಪದ ಬಂದರನ್ನು ಆಶ್ರಯಿಸಿವೆ.
ಆಳಸಮುದ್ರದಲ್ಲಿರುವ ಬೋಟುಗಳು ಗಾಳಿಯ ಒತ್ತಡ ಕಡಿಮೆ ಆದಾಗ ಮೀನುಗಾರಿಕೆ ಮಾಡುವ ಸಾಧ್ಯತೆ ಇದೆ. ಬಂದರು ಸೇರಿರುವ ದೋಣಿಗಳು ಹವಾಮಾನ ಇಲಾಖೆ ಸೂಚನೆಯ ಬಳಿಕ ಹೊರಡಲಿವೆ ಎಂದು ಮಲ್ಪೆ ಮೀನುಗಾರರ ಸಂಘದ ಕಾರ್ಯದರ್ಶಿ ರತ್ನಾಕರ ಸಾಲ್ಯಾನ್ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…