ಮಲ್ಪೆ: ರಸ್ತೆ ಬದಿಯಲ್ಲಿ ಬೆಳೆದ ಅಣಬೆ ತಿಂದು ಮೂವರು ಅಸ್ವಸ್ಥಗೊಂಡ ಘಟನೆ ಮಲ್ಪೆ ಸಮೀಪದ ತೊಟ್ಟಂನಲ್ಲಿ ಸಂಭವಿಸಿದೆ.
ಗದಗ ಮೂಲದ ಅಣ್ಣಪ್ಪ (45), ಸುಜಾತಾ (25) ಮತ್ತು ಸಂಗೀತಾ (7) ಅಸ್ವಸ್ಥರಾದವರು.
ಅವರು ಮಲ್ಪೆ ಸಮೀಪದ ತೊಟ್ಟಂನಲ್ಲಿ ದಿನಗೂಲಿ ಕೆಲಸ ಮಾಡಿಕೊಂಡಿದ್ದು ಕೆಲಸ ಮುಗಿಸಿ ಮನೆಗೆ ತೆರಳುವಾಗ ರಸ್ತೆ ಬದಿಯಲ್ಲಿ ಬೆಳೆದಿದ್ದ ಅಣಬೆಯನ್ನು ತೆಗೆದುಕೊಂಡು ಹೋಗಿ ಮನೆಯಲ್ಲಿ ಹಸಿಯಾಗಿಯೇ ಹಂಚಿಕೊಂಡು ತಿಂದಿದ್ದಾರೆ. ಬಳಿಕ ಮೂವರೂ ತೀವ್ರ ಅಸ್ವಸ್ಥಗೊಂಡ ಕಾರಣ ಮನೆಯ ಇತರರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆ ತಂದರು.
ವಿಷಯ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ತಂಡ ತತ್ಕ್ಷಣ ಸ್ಥಳಕ್ಕೆ ತೆರಳಿ ಆ್ಯಂಬುಲೆನ್ಸ್ ಮೂಲಕ ಮೂವರನ್ನೂ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…