ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಓಣಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದ , ತೀವ್ರವಾಗಿ ಗಾಯಗೊಂಡಿದ್ದ ನವಜಾತ ಶಿಶು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಹೂಡೆಯ ಅಬ್ದುಲ್ ಶುಕೂರ್ ಎಂಬವರು ಮನೆಯಿಂದ ಹೊರಗೆ ಬಂದಾಗ, ಮನೆಯ ಪಕ್ಕದ ಓಣಿಯಲ್ಲಿ ಯಾವುದೇ ಬಟ್ಟೆ ಇಲ್ಲದೆ ಕವಚಿ ಮಲಗಿಸಿಟ್ಟಿದ್ದ ನವಜಾತ ಗಂಡು ಶಿಶು ಕಂಡುಬಂದಿದ್ದು, ಅದರ ವಾರಸುದಾರರು ಯಾರೂ ಅಲ್ಲಿ ಪತ್ತೆಯಾಗಿರುವುದಿಲ್ಲ.
ಇದನ್ನೂ ಓದಿ :
ಅವರು ಕೂಡಲೇ ನೆರೆಹೊರೆಯವರಿಗೆ ಮಾಹಿತಿ ನೀಡಿ ಮಗುವನ್ನು ನೋಡಿದಾಗ ಜೀವಂತವಾಗಿರುವುದು ಕಂಡುಬಂದಿದೆ. ಮಗುವಿನ ಮುಖದ ಮೇಲೆ ಗಾಯವಾಗಿದ್ದು, ಬಾಯಲ್ಲಿ ರಕ್ತಸ್ರಾವ ಆಗುತ್ತಿತ್ತು. ಆದುದರಿಂದ ಕೂಡಲೇ ಮಗುವನ್ನು ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದುಕೊಂಡು ದಾಖಲಿಸಲಾಯಿತು.
ಆದರೆ ಗಂಭೀರ ಸ್ಥಿತಿಯಲ್ಲಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿತು ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಶಿಶು ಕೇವಲ ಒಂದು ದಿನದ ಹಿಂದೆಯಷ್ಟೇ ಜನಿಸಿರಬಹುದು ಎಂದು ಅಂದಾಜಿಸಲಾಗಿದೆ. ಶಿಶುವಿನ ಬಾಯಲ್ಲಿ ಗಾಯವಾಗಿ ರಕ್ತಸ್ರಾವ ಆಗುತ್ತಿರುವುದರಿಂದ ಮೃತಪಟ್ಟಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುರಕ್ಷಾ ತಿಳಿಸಿದ್ದಾರೆ.
‘ಹುಟ್ಟಿದ ಮಗುವನ್ನು ಉತ್ತರ ಭಾರತದ ವಲಸೆ ಕಾರ್ಮಿಕರು ಬಿಟ್ಟು ಹೋಗಿರುವ ಸಾಧ್ಯತೆ ಇದೆ. ಈ ಬಗ್ಗೆ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ’ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಉಡುಪಿ: ಬಾರ್ಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ಉಡುಪಿ: ತುಳುನಾಡಿನ ಚಾರಿತ್ರಿಕ ರಾಜಧಾನಿ ಬಾರ್ಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ…
ಉಡುಪಿ: ಆಸ್ಟ್ರೋ ಮೋಹನ್ಗೆ ಅಮೆರಿಕದ ಪ್ರತಿಷ್ಠಿತ ‘ಇಪಿಎಸ್ಎ’ ಗೌರವ ಮೂರು ದಶಕಗಳ ಛಾಯಾಪತ್ರಿಕೋದ್ಯಮ, ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರದರ್ಶನಗಳಲ್ಲಿನ ನಿರಂತರ ಸಾಧನೆಗೆ…
ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿಗೆ ಚರ್ಚೆ : ಮುಖ್ಯಮಂತ್ರಿ ಡಿ.ಕೆ.ಶಿ ದೇವನಹಳ್ಳಿ: ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ…
ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ 25 ದಿನಕ್ಕೊಮ್ಮೆ ಎಲ್ಪಿಜಿ ಸಿಲಿಂಡರ್ ನವದೆಹಲಿ: ಗ್ರಾಮೀಣ ಪ್ರದೇಶಗಳಲ್ಲಿ ಎಲ್ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ…
ಸುಳ್ಯ: ಮರ ಕತ್ತರಿಸುವ ವೇಳೆ ಹೃದಯಘಾತ ; ವ್ಯಕ್ತಿ ಸಾವು ಸುಳ್ಯ: ತಾಲೂಕಿನ ತೊಡಿಕಾನ ಗ್ರಾಮದ ಬಾಳೆಕಜೆ ದಿ.ಆನಂದ ಅವರ…
ಸೆ.20 ರಿಂದ 108 ಸೇವೆ ಬಂದ್ ; ಸರ್ಕಾರಕ್ಕೆ ಸಿಬ್ಬಂದಿ ಡೆಡ್ಲೈನ್.. 3,500 ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ಬೆಂಗಳೂರು:…