Featured

ಮಲ್ಪೆ : ರಾಜ್ಯದ ಮೊದಲ ತೇಲುವ ಸೇತುವೆ ( ಫ್ಲೋಟಿಂಗ್ ಬ್ರಿಡ್ಜ್‌)  ಶೀಘ್ರ ಪ್ರವಾಸಿಗರಿಗೆ ಮುಕ್ತ – Vishwanews24

ಉಡುಪಿ : ಮಲ್ಪೆ ಕಡಲ ಕಿನಾರೆಯಲ್ಲಿ ತೇಲುವ ಸೇತುವೆ ಶೀಘ್ರ ಪ್ರವಾಸಿಗರಿಗೆ ಮುಕ್ತ

ಉಡುಪಿ: ಮಲ್ಪೆಯ ಕಡಲ ಕಿನಾರೆಯಲ್ಲಿ ಮತ್ತೆ ತೇಲುವ ಸೇತುವೆ (ಫ್ಲೋಟಿಂಗ್ ಬ್ರಿಡ್ಜ್‌) ನಿರ್ಮಾಣವಾಗುತ್ತಿದ್ದು ಕೆಲವೇ ದಿನಗಳಲ್ಲಿ ಪ್ರವಾಸಿಗರಿಗೆ ಮುಕ್ತವಾಗಲಿದೆ.

ಕಳೆದ ಬಾರಿಯ ಅವಘಡ ಮತ್ತೊಮ್ಮೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಈ ಬಾರಿ ಹೊರ ರಾಜ್ಯ ಹಾಗೂ ರಾಜ್ಯದ ಕಡಲ ತಜ್ಞರ ತಂಡಗಳು ತೇಲುವ ಸೇತುವೆಯ ಸಾಮರ್ಥ್ಯ, ಕಾರ್ಯಕ್ಷಮತೆಯನ್ನು ಪರೀಕ್ಷೆಗೊಳಪಡಿಸಿ ದೃಢೀಕರಿಸಿವೆ.

ತೇಲುವ ಸೇತುವೆ ಚಂಡಮಾರುತದಂತಹ ಪ್ರತಿಕೂಲ ವಾತಾವರಣವನ್ನು ತಡೆದುಕೊಳ್ಳಬಹುದೇ? ದೈತ್ಯ ಅಲೆಗಳು ಅಪ್ಪಳಿಸಿದರೆ ತಾಳಿಕೊಳ್ಳುವುದೇ ಎಂಬುದನ್ನು ವೈಜ್ಞಾನಿಕವಾಗಿ ಪರೀಕ್ಷೆ ಗೊಳಪಡಿಸಿದೆ.

ಜತೆಗೆ, ಅಲೆಗಳ ಏರಿಳಿತ, ಪ್ರತಿಕೂಲ ವಾತಾವರಣ ಹಾಗೂ ಸೇತುವೆ ಅಳವಡಿಸುವ ಜಾಗವನ್ನು ಪರಿಶೀಲಿಸಿರುವ ತಂಡ ಶೀಘ್ರ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಿದೆ. ಅಲ್ಲಿಂದ ಒಪ್ಪಿಗೆ ಸಿಕ್ಕ ಬಳಿಕ ತೇಲುವೆ ಸೇತುವೆ ಪ್ರವಾಸಿಗರ ಬಳಕೆಗೆ ಲಭ್ಯವಾಗಲಿದೆ.

ಗುಣಮಟ್ಟದ ಸೇತುವೆ:
ಕಳೆದ ಮೇನಲ್ಲಿ ಅಳವಡಿಸಲಾಗಿದ್ದ ತೇಲುವ ಸೇತುವೆ ಹಾಳಾಗಲು ಹಲವು ಕಾರಣಗಳಿವೆ. ಸೇತುವೆ ಅಳವಡಿಸಿದ ಕೂಡಲೇ ಚಂಡಮಾರುತ ಬೀಸಿದ್ದರಿಂದ ದೈತ್ಯ ಅಲೆಗಳು ಅಪ್ಪಳಿಸಿ ಸೇತುವೆಗೆ ಹಾನಿಯಾಯಿತು. ಸೇತುವೆಗೆ ಅಳವಡಿಸಿದ್ದ ಫಾಂಟೂನ್ಸ್‌ಗಳು ಕಿತ್ತುಬಂದಿದ್ದವು.

ಕಳೆದ ಬಾರಿಯ ತಪ್ಪು ಮತ್ತೊಮ್ಮೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಈ ಬಾರಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ. ಅತ್ಯುತ್ತಮ ಗುಣಮಟ್ಟದ ತೇಲುವ ಸೇತುವೆಯನ್ನು ಹೊರಗಗಿನಿಂದ ಆಮದು ಮಾಡಿಕೊಂಡು ಅಳವಡಿಸಲಾಗಿದೆ ಎನ್ನುತ್ತಾರೆ ಮಲ್ಪೆ ಬೀಚ್‌ನ ಕಾರ್ಯ ನಿರ್ವಾಹಕ ಸುದೇಶ್ ಶೆಟ್ಟಿ.

ಗರಿಷ್ಠ ಸುರಕ್ಷತೆ:
ಸೇತುವೆ ಅಳವಡಿಸಿರುವ ಜಾಗದಲ್ಲಿ 2.5 ಮೀಟರ್‌ ಆಳ ಮಾತ್ರ ಇದ್ದು, ಪ್ರಾಣಾಪಾಯವಾಗುವ ಸಾಧ್ಯತೆಗಳು ತೀರಾ ಕಡಿಮೆ. ಆದರೂ ಪ್ರವಾಸಿಗರ ಸುರಕ್ಷತೆಗೆ ಗರಿಷ್ಠ ಒತ್ತು ನೀಡಲಾಗಿದೆ. 20 ಮಂದಿ ಲೈಫ್‌ಗಾರ್ಡ್‌ಗಳನ್ನು ನಿಯೋಜಿಸಲಾಗುವುದು. ಸೇತುವೆ ಹತ್ತುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲೈಫ್

ಜಾಕೆಟ್‌ ಧರಿಸಬೇಕು.
ಸೇತುವೆಯ ಮೇಲೆ ಏಕಕಾಲಕ್ಕೆ 100ಕ್ಕೂ ಹೆಚ್ಚು ಮಂದಿ ನಡೆಯಬಹುದು. ಅಲೆಗಳ ಏರಿಳಿತಕ್ಕೆ ತಕ್ಕಂತೆ ಸೇತುವೆ ತೇಲಾಡುವಾಗ ರೋಚಕ ಅನುಭವ ದೊರೆಯಲಿದೆ. ಸೇತುವೆಯ ಕೊನೆಯಲ್ಲಿ ನಿಂತು ಸಮುದ್ರದ ಅಲೆಗಳ ಸೌಂದರ್ಯವನ್ನು ಹತ್ತಿರದಿಂದ ಆಸ್ವಾದಿಸಬಹುದು. ಅಲೆಗಳೊಟ್ಟಿಗೆ ಹೆಜ್ಜೆ ಹಾಕಬಹುದು ಎನ್ನುತ್ತಾರೆ ಸುದೇಶ್‌ ಶೆಟ್ಟಿ.

‘ರಾಜ್ಯದ ಮೊದಲ ತೇಲುವ ಸೇತುವೆ’
ಮಲ್ಪೆಯ ತೇಲುವ ಸೇತುವೆಯು ಸಮುದ್ರ ತೀರದಲ್ಲಿ ಅಳವಡಿಸಿರುವ ರಾಜ್ಯದ ಮೊದಲ ತೇಲುವ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೂ ಪೂರಕವಾಗಲಿದೆ. ಪ್ರವಾಸಿಗರಿಗೆ ತೇಲುವ ಸೇತುವೆ ನಿಜಕ್ಕೂ ಹೊಸ ಅನುಭವ ನೀಡಲಿದೆ.
– ಸುದೇಶ್ ಶೆಟ್ಟಿ, ಬೀಚ್ ನಿರ್ವಾಹಕ

ಸಾಮಾಜಿಕ ಜಾಲತಾಣದಲ್ಲಿ ವೈರಲ್‌
2022, ಮೇ 6ರಂದು ಮಲ್ಪೆಯಲ್ಲಿ ರಾಜ್ಯದ ಮೊದಲ ತೇಲುವ ಸೇತುವೆಯನ್ನು ನಿರ್ಮಿಸಲಾಗಿತ್ತು. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ನಗರಸಭೆ ಸಹಕಾರದಲ್ಲಿ ಮಲ್ಪೆ ಬೀಚ್‌ ನಿರ್ವಹಣಾ ಸಮಿತಿ ಹಾಗೂ ಸ್ಥಳೀಯ ಸಂಘಟನೆಗಳು ಖಾಸಗಿಯಾಗಿ ₹ 80 ಲಕ್ಷ ವೆಚ್ಚದಲ್ಲಿ ತೇಲುವ ಸೇತುವೆ ನಿರ್ಮಿಸಿದ್ದವು. ಮೂರೇ ದಿನಗಳಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸೇತುವೆ ಹಾಳಾಗಿತ್ತು. ಸೇತುವೆ ಹಾಳಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago