Featured

ಮಲ್ಪೆ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ – vishwanews24

ಮಲ್ಪೆ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ

ಮಲ್ಪೆ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿರುವ ಪ್ರಕರಣದ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಳಾರ್ಕಳಬೆಟ್ಟು ಗ್ರಾಮದ ನೇಜಾರಿನ ಓಡ್ರಿನ್‌ ಡಿ’ಸೋಜಾ ಅವರು ಕಲ್ಯಾಣಪುರ ತೋನ್ಸೆಯ ರಾಯ್ಸನ್‌ ಅಂಟೋನಿ ಬರೆಟ್ಟೋ ಅವರಲ್ಲಿ ಯು.ಕೆ. ಮತ್ತು ಕೆನಡಾ ದೇಶದಲ್ಲಿ ಹಲವು ಉದ್ಯೋಗಗಳಿವೆ. ಅದಕ್ಕೆ 5 ಲ.ರೂ. ಖರ್ಚಾಗುತ್ತದೆ. 2 ಕಂತುಗಳಲ್ಲಿ ಪಾವತಿಸುವಂತೆ ತಿಳಿಸಿದ್ದರು. ಮೊದಲು 2.50 ಲ.ರೂ. ಅನ್ನು ಬಹ್ರೈನ್‌ನಲ್ಲಿರುವ ರಾಜು ಕೈತ ಅಂಧ್ರಪ್ರದೇಶ ಅವರ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಅದಕ್ಕೆ ಒಪ್ಪಿಕೊಂಡ ರಾಯ್ಸನ್‌ ಅಂಟೋನಿ ಅವರು ಹಣವನ್ನು ವರ್ಗಾವಣೆ ಮಾಡಿದ್ದರು.

ಇದಾಗಿ ಮೂರು ತಿಂಗಳು ಕಳೆದರೂ ಯಾವುದೇ ವೀಸಾ ಸಿಗಲಿಲ್ಲ. ಈ ಬಗ್ಗೆ ರಾಜು ಕೈತ ಅವರಿಗೆ ಕರೆ ಮಾಡಿ ಸಂಪರ್ಕಿಸಿದಾಗ ಬಾಕಿ ಉಳಿದ ಎರಡೂವರೆ ಲಕ್ಷ ರೂಪಾಯಿ ನೀಡುವಂತೆ ತಿಳಿಸಿದ‌ರು. ಅದರಂತೆ ರಾಯ್ಸನ್‌ ಅಂಟೋನಿ ಬರೆಟ್ಟೋ ಅವರು ಆದೇ ಖಾತೆಗೆ ಉಳಿದ ಹಣವನ್ನು ವರ್ಗಾಯಿಸಿದ್ದರು. ಆನಂತರ ಕೆಲವು ದಿನಗಳು ಕಳೆದರೂ ವೀಸಾ ಮಾತ್ರ ಸಿಗಲಿಲ್ಲ. ಅನುಮಾನಗೊಂಡ ಈ ಬಗ್ಗೆ ಹಣ ವಾಪಸು ಕೇಳಿದ್ದಕ್ಕೆ ಬೆದರಿಕೆಯನ್ನು ಹಾಕಿದ್ದಾರೆ ಎಂದು ರಾಯ್ಸನ್‌ ಅಂಟೋನಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago