ಮಲ್ಪೆ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿರುವ ಪ್ರಕರಣದ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಳಾರ್ಕಳಬೆಟ್ಟು ಗ್ರಾಮದ ನೇಜಾರಿನ ಓಡ್ರಿನ್ ಡಿ’ಸೋಜಾ ಅವರು ಕಲ್ಯಾಣಪುರ ತೋನ್ಸೆಯ ರಾಯ್ಸನ್ ಅಂಟೋನಿ ಬರೆಟ್ಟೋ ಅವರಲ್ಲಿ ಯು.ಕೆ. ಮತ್ತು ಕೆನಡಾ ದೇಶದಲ್ಲಿ ಹಲವು ಉದ್ಯೋಗಗಳಿವೆ. ಅದಕ್ಕೆ 5 ಲ.ರೂ. ಖರ್ಚಾಗುತ್ತದೆ. 2 ಕಂತುಗಳಲ್ಲಿ ಪಾವತಿಸುವಂತೆ ತಿಳಿಸಿದ್ದರು. ಮೊದಲು 2.50 ಲ.ರೂ. ಅನ್ನು ಬಹ್ರೈನ್ನಲ್ಲಿರುವ ರಾಜು ಕೈತ ಅಂಧ್ರಪ್ರದೇಶ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಅದಕ್ಕೆ ಒಪ್ಪಿಕೊಂಡ ರಾಯ್ಸನ್ ಅಂಟೋನಿ ಅವರು ಹಣವನ್ನು ವರ್ಗಾವಣೆ ಮಾಡಿದ್ದರು.
ಇದಾಗಿ ಮೂರು ತಿಂಗಳು ಕಳೆದರೂ ಯಾವುದೇ ವೀಸಾ ಸಿಗಲಿಲ್ಲ. ಈ ಬಗ್ಗೆ ರಾಜು ಕೈತ ಅವರಿಗೆ ಕರೆ ಮಾಡಿ ಸಂಪರ್ಕಿಸಿದಾಗ ಬಾಕಿ ಉಳಿದ ಎರಡೂವರೆ ಲಕ್ಷ ರೂಪಾಯಿ ನೀಡುವಂತೆ ತಿಳಿಸಿದರು. ಅದರಂತೆ ರಾಯ್ಸನ್ ಅಂಟೋನಿ ಬರೆಟ್ಟೋ ಅವರು ಆದೇ ಖಾತೆಗೆ ಉಳಿದ ಹಣವನ್ನು ವರ್ಗಾಯಿಸಿದ್ದರು. ಆನಂತರ ಕೆಲವು ದಿನಗಳು ಕಳೆದರೂ ವೀಸಾ ಮಾತ್ರ ಸಿಗಲಿಲ್ಲ. ಅನುಮಾನಗೊಂಡ ಈ ಬಗ್ಗೆ ಹಣ ವಾಪಸು ಕೇಳಿದ್ದಕ್ಕೆ ಬೆದರಿಕೆಯನ್ನು ಹಾಕಿದ್ದಾರೆ ಎಂದು ರಾಯ್ಸನ್ ಅಂಟೋನಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ ಉಡುಪಿ: ಇಲ್ಲಿನ ಶ್ರೀ ಕೃಷ್ಣ…
ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…
ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…
ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ಸ್ಥಗಿತಗೊಂಡಿದ್ದ ಪುಣೆ ಏರ್ಪೋರ್ಟ್ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್ನಿಂದ ರಾತ್ರಿಯಿಡೀ…