ಮಲ್ಪೆ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿರುವ ಪ್ರಕರಣದ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಳಾರ್ಕಳಬೆಟ್ಟು ಗ್ರಾಮದ ನೇಜಾರಿನ ಓಡ್ರಿನ್ ಡಿ’ಸೋಜಾ ಅವರು ಕಲ್ಯಾಣಪುರ ತೋನ್ಸೆಯ ರಾಯ್ಸನ್ ಅಂಟೋನಿ ಬರೆಟ್ಟೋ ಅವರಲ್ಲಿ ಯು.ಕೆ. ಮತ್ತು ಕೆನಡಾ ದೇಶದಲ್ಲಿ ಹಲವು ಉದ್ಯೋಗಗಳಿವೆ. ಅದಕ್ಕೆ 5 ಲ.ರೂ. ಖರ್ಚಾಗುತ್ತದೆ. 2 ಕಂತುಗಳಲ್ಲಿ ಪಾವತಿಸುವಂತೆ ತಿಳಿಸಿದ್ದರು. ಮೊದಲು 2.50 ಲ.ರೂ. ಅನ್ನು ಬಹ್ರೈನ್ನಲ್ಲಿರುವ ರಾಜು ಕೈತ ಅಂಧ್ರಪ್ರದೇಶ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಅದಕ್ಕೆ ಒಪ್ಪಿಕೊಂಡ ರಾಯ್ಸನ್ ಅಂಟೋನಿ ಅವರು ಹಣವನ್ನು ವರ್ಗಾವಣೆ ಮಾಡಿದ್ದರು.
ಇದಾಗಿ ಮೂರು ತಿಂಗಳು ಕಳೆದರೂ ಯಾವುದೇ ವೀಸಾ ಸಿಗಲಿಲ್ಲ. ಈ ಬಗ್ಗೆ ರಾಜು ಕೈತ ಅವರಿಗೆ ಕರೆ ಮಾಡಿ ಸಂಪರ್ಕಿಸಿದಾಗ ಬಾಕಿ ಉಳಿದ ಎರಡೂವರೆ ಲಕ್ಷ ರೂಪಾಯಿ ನೀಡುವಂತೆ ತಿಳಿಸಿದರು. ಅದರಂತೆ ರಾಯ್ಸನ್ ಅಂಟೋನಿ ಬರೆಟ್ಟೋ ಅವರು ಆದೇ ಖಾತೆಗೆ ಉಳಿದ ಹಣವನ್ನು ವರ್ಗಾಯಿಸಿದ್ದರು. ಆನಂತರ ಕೆಲವು ದಿನಗಳು ಕಳೆದರೂ ವೀಸಾ ಮಾತ್ರ ಸಿಗಲಿಲ್ಲ. ಅನುಮಾನಗೊಂಡ ಈ ಬಗ್ಗೆ ಹಣ ವಾಪಸು ಕೇಳಿದ್ದಕ್ಕೆ ಬೆದರಿಕೆಯನ್ನು ಹಾಕಿದ್ದಾರೆ ಎಂದು ರಾಯ್ಸನ್ ಅಂಟೋನಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…