Featured

ಮಲ್ಪೆ: ಸಂವಿಧಾನದ ಬುಡಕ್ಕೆ ಕೈಹಾಕಿದರೆ ನಿಮ್ಮನ್ನು ಸುಟ್ಟು ಬೂದಿ ಮಾಡುವ ದಲಿತರ ದಂಡು ಸಿದ್ದವಿದೆ : ಜಯನ್ ಮಲ್ಪೆ ಎಚ್ಚರಿಕೆ – vishwanews24

ಮಲ್ಪೆ: ಸಂವಿಧಾನದ ಬುಡಕ್ಕೆ ಕೈಹಾಕಿದರೆ ನಿಮ್ಮನ್ನು ಸುಟ್ಟು ಬೂದಿ ಮಾಡುವ ದಲಿತರ ದಂಡು ಸಿದ್ದವಿದೆ : ಜಯನ್ ಮಲ್ಪೆಎಚ್ಚರಿಕೆ

ಮಲ್ಪೆ, : ಧಾರ್ಮಿಕತೆಯೆಂದು ಜಾತಿಯತೆ ಬೋಧಿಸುವ ಧರ್ಮ ದಲಿತರನ್ನು ಕ್ರೂರವಾಗಿ ಹಿಂಸೆ ಮಾಡಿದೆ. ಸಹಾನುಭೂತಿ, ಸಮಾನತೆ ಮತ್ತು ಸ್ವಾತಂತ್ರ್ಯ ಈ ಮೂರು ಅಂಶಗಳಿಲ್ಲದ ಧರ್ಮದ ಹೆಸರಿನಲ್ಲಿ ಸಂವಿಧಾನದ ಬುಡಕ್ಕೆ ಕೈಹಾಕಿದರೆ ನಿಮ್ಮನ್ನು ಸುಟ್ಟು ಬೂದಿ ಮಾಡುವ ದಲಿತರ ದಂಡು ಸಿದ್ದವಿದೆ ಎಂದು ಜನಪರ ಹೋರಾಟಗಾರ ಜಯನ್ ಮಲ್ಪೆಎಚ್ಚರಿಕೆ ನೀಡಿದ್ದಾರೆ.

ಅಂಬೇಡ್ಕರ್ ಯುವಸೇನೆಯ ಜಿಲ್ಲಾ ಘಟಕದ ವತಿಯಿಂದ ಮಲ್ಪೆ ಗಾಂಧಿ ಶತಾಬ್ಧಿ ಶಾಲಾ ಮೈದಾನದಲ್ಲಿ ಶುಕ್ರವಾರ ಮಕ್ಕಳ ಜೊತೆ ಆಯೋಜಿಸಲಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ವರ 68ನೇ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಧರ್ಮ ಇರುವುದು ಮನುಷ್ಯನಿಗಾಗಿ, ಮನುಷ್ಯನಿರುವುದು ಧರ್ಮಕ್ಕಲ್ಲ. ನಿಮ್ಮ ಧರ್ಮದಲ್ಲಿರುವ ಅಸಮಾನತೆ ಜಗತ್ತಿನ ಯಾವ ಧರ್ಮದಲ್ಲೂ ಸಿಗುವುದಿಲ್ಲ ಎಂದ ಜಯನ್ ಮಲ್ಪೆ ಇಂದಿನ ನಿಮ್ಮ ಧರ್ಮಕ್ಕೆ ದೇವರು, ನೀತಿ ಎರಡೂ ಇಲ್ಲ. ಇಂತಹ ಸ್ಥಿತಿ ಕೇವಲ ಮಾನವನ ಮನಸ್ಸಿನ ಪತನಕ್ಕೆ ದಾರಿ ಮಾಡಿಕೊಡುತ್ತದೆ ಎಂದರು.

ಹಿರಿಯ ದಲಿತ ಮುಖಂಡ ಕೆ.ಕರುಣಾಕರ ಮಾಸ್ತರ್ ಮಾತನಾಡಿ, ಸಂವಿಧಾನ ಉಳಿದರೆ ಮಾತ್ರ ನಮ್ಮ ಬದುಕು. ಮಕ್ಕಳು ಅಂಬೇಡ್ಕರ್ ಚಿಂತನೆ ಯೊಂದಿಗೆ ಸಾಮಾಜಿಕ ಹೋರಾಟದಿಂದ ಜಾಗೃತಿ ಮಾಡಬೇಕು ಎಂದು ತಿಳಿಸಿದರು.

ದಲಿತ ಹಕ್ಕುಗಳ ಹೋರಾಟ ಸಮಿತಿಯ ಸಜೀವ ಬಳ್ಕೂರು ಮಾತನಾಡಿ, ಅಂಬೇಡ್ಕರರ ಮೀಸಲಾತಿಯ ಲಾಭ ಪಡೆದ ಬಹುತೇಕ ವಿದ್ಯಾವಂತರು, ದಲಿತ ನೌಕರರು, ಅಧಿಕಾರಿಗಳ, ರಾಜಕಾರಣಿಗಳ ದೊಡ್ಡ ವರ್ಗವಿದ್ದರೂ ದಲಿತ ಸಮಾಜ ವಿಘಟನೆಗೊಂಡಿರುವುದು ಅಂಬೇಡ್ಕರ್‌ಗೆ ಎಸಗಿದ ದ್ರೋಹ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಬೇಡ್ಕರ್ ಯುವಸೇನೆಯ ಸ್ಥಾಪಕ ಅಧ್ಯಕ್ಷ ಹರೀಶ್ ಸಾಲ್ಯಾನ್ ಮಾತನಾಡಿ, ಸತಿ ಪದ್ಧತಿ, ದೇವದಾಸಿ ಪದ್ಧತಿ, ವಿಧವಾ ಪದ್ಧತಿ, ಶಿಶುಹತ್ಯೆ ಗಳಂತಹ ಘೋರ ಕೃತ್ಯಗಳು ಧರ್ಮದ ಹೆಸರಿನಲ್ಲಿ ನಡೆಯುತ್ತಿದ್ದ ಕಟ್ಟು ಪಾಡಿನ ವಿರುದ್ಧ ಮತ್ತು ಮಹಿಳೆಯರಿಗೆ ಶಿಕ್ಷಣ ಹಾಗೂ ಆಸ್ತಿಯ ಹಕ್ಕು ನೀಡಿದ ಅಂಬೇಡ್ಕರ್ ಮಹಿಳಾ ವಿಮೋಚನೆಗಾಗಿ ಶ್ರಮಿಸಿದ ನಾಯಕ ಎಂದು ತಿಳಿಸಿದರು.

ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಮಾತನಾಡಿದರು. ದಲಿತ ಮುಖಂಡರಾದ ಸಂತೋಷ್ ಕಪ್ಪೆಟ್ಟು, ರವಿ ಲಕ್ಷ್ಮೀನಗರ, ಸುಮಿತ್ ನೆರ್ಗಿ, ದಯಾಕರ್ ಮಲ್ಪೆ, ಸಾಧು ಚಿಟ್ಪಾಡಿ, ವಿನಯ ಕೊಡಂಕೂರು, ಜಯ ಸಾಲ್ಯಾನ್, ಪ್ರಸಾದ್ ಮಲ್ಪೆ, ಅನಂತ ಕುಂದರ್ ನೆರ್ಗಿ, ಈಶ್ವರ್ ಗದಗ, ಗುಣವಂತ ತೊಟ್ಟಂ, ಬಿ.ಎನ್.ಪ್ರಶಾಂತ್, ಸುಶೀಲ್ ಕುಮಾರ್, ದೀಪಕ್ ಕೊಡವೂರು, ಮಿಥುನ್ ಲಕ್ಷ್ಮೀನಗರ, ಅರುಣ್ ಸಾಲ್ಯಾನ್, ಮೋಹನ್ ಗುಜ್ಜರಬೆಟ್ಟು, ಶಶಿಕಲಾ ತೊಟ್ಟಂ, ಸಂಕಿ ತೊಟ್ಟಂ, ಶಕಿ ಕಪ್ಪೆಟ್ಟು, ಕಿರಣ, ಸತೀಶ್ ಬೈಲಕೆರೆ, ಹರೀಶ್ ತೊಟ್ಟಂ, ಶಿಕ್ಷಕ ರಕ್ಷಕ ಸಂಘದ ರವಿರಾಜ್, ಅಶೋಕ್ ಕೋಟ್ಯಾನ್, ಮುಖೋಪದ್ಯಾಯರಾದ ಪ್ರೇಮಾನಂದ, ವೇದಾವತಿ, ಪೂರ್ಣಿಮ ಮೊದಲಾದವರು ಉಪಸ್ಥಿತರಿದ್ದರು.

ವಾದಿರಾಜ್ ಪಾಳೆಕಟ್ಟೆ ಸ್ವಾಗತಿಸಿದರು. ಸತೀಶ್ ಕಪ್ಪೆಟ್ಟು ವಂದಿಸಿದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

13 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

14 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

14 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

14 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

14 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

16 hours ago