ಮಲ್ಪೆ : ಮಳೆ- ಗಾಳಿಯಿಂದಾಗಿಸಮುದ್ರ ಪ್ರಕ್ಷುಬ್ಧ ಗೊಂಡು 7-8 ದಿನಗಳಿಂದ ಸ್ಥಗಿತ ಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭಗೊಂಡಿದೆ. ಸಮುದ್ರ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದ್ದು, ಯಾಂತ್ರಿಕ ಬೋಟುಗಳು ಕಡಲಿಗಿಳಿಯಲಾರಂಭಿಸಿವೆ.
ಬುಧವಾರ ಮಲ್ಪೆ ಬಂದರಿನಿಂದ ಸುಮಾರು ಶೇ. 40ರಷ್ಟು ಆಳಸಮುದ್ರ ಬೋಟುಗಳು ಕಡಲಿಗಿಳಿದಿವೆ. ಬಹುತೇಕ ಪಸೀìನ್ ಬೋಟುಗಳು ಬೆಳಗ್ಗೆಯೇ ಮೀನುಗಾರಿಕೆಗೆ ತೆರಳಿದ್ದವು. ಇನ್ನು ಕೆಲವು ಬೋಟುಗಳು ಕಡಲಿಗಿಳಿಯಲು ಸಿದ್ಧತೆ ನಡೆಸುತ್ತಿವೆ.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮೀನುಗಾರಿಕೆ ಋತು ಆರಂಭಗೊಂಡ ಒಂದು ತಿಂಗಳು ಕಳೆದು ಕೊಂಚ ಆದಾಯ ಗಳಿಸುವಷ್ಟರಲ್ಲೇ ಪ್ರತಿಕೂಲ ಹವಾಮಾನ ಸಂಭವಿಸಿದ್ದು ಮೀನು ಗಾರಿಕೆಯನ್ನು ನಡೆಸದಂತಾಗಿತ್ತು. 8 ದಿನಗಳಲ್ಲಿ ನಿತ್ಯ ಕೋಟ್ಯಂತರ ರೂಪಾಯಿ ವ್ಯವಹಾರಕ್ಕೆ ಹೊಡೆತ ಉಂಟಾಗಿತ್ತು. ಇದೀಗ ಮೀನುಗಾರಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಮೀನುಗಾರರು ಕಡಲಿಗಿಳಿಯಲು ಸಜ್ಜಾಗಿದ್ದಾರೆ. ಗುರುವಾರ ದಿಂದ ಉಳಿದ ಬೋಟ್ಗಳು ತೆರಳುವ ಸಾಧ್ಯತೆ ಇದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ತಿಳಿಸಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…