ಉಡುಪಿ : ಸಮುದ್ರದಲ್ಲಿ ಸೈಕ್ಲೋನ್ ನಿಂದಾಗಿ ಉಂಟಾಗಿರುವ ಅಲೆಗಳ ಅಬ್ಬರದಿಂದಾಗಿ ಮುಂಜಾಗೃತಾ ಕ್ರಮವಾಗಿ ಮಲ್ಪೆ ಬೀಚ್ನಲ್ಲಿ ನೂತನವಾಗಿ ಆರಂಭಗೊಂಡಿರುವ ತೇಲುವ ಸೇತುವೆ ಸೇರಿದಂತೆ ಜಲ ಕ್ರೀಡೆಗಳನ್ನು ಮೂರು ದಿನಗಳ ಮಟ್ಟಿಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ನಿರ್ವಹಣಾ ಸಮಿತಿ ಉಸ್ತುವಾರಿ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.
ಮಲ್ಪೆ ಬೀಚ್ ನಲ್ಲಿ ಇತ್ತೀಚೆಗೆ ಅರಂಭಗೊಂಡಿರುವ ತೇಲುವ ಸೇತುವ (ಫ್ಲೋಟಿಂಗ್ ಬ್ರಿಡ್ಜ್) ನ ಕುರಿತಾಗಿ ಹಬ್ಬಿರು ವದಂತಿಗಳಿಗೆ ಸ್ಪಷ್ಟನೆ ನೀಡಿ ಪ್ರತಿಕ್ರಿಯೆ ನೀಡಿದ ಅವರು, ಈ ಸೇತುವೆಯಲ್ಲಿ ಸುರಕ್ಷತೆಯ ದೃಷ್ಠಿಯಿಂದ ಸೆಂಟರ್ ಲಾಕ್ ವ್ಯವಸ್ಥೆಯನ್ನು ತೆಗೆದಿಡಲಾಗಿದೆ. ಇದರಿಂದಾಗಿ ಸೇತುವೆಯ ಕೆಲವು ಬ್ಲಾಕ್ಗಳು ಸಮುದ್ರದಲ್ಲಿ ತೇಲುತ್ತಿದ್ದವು. ಆದರೆ ಜನರು ಇದನ್ನು ತಪ್ಪಾಗಿ ಗ್ರಹಿಸಿಕೊಂಡು ವಂದತಿಗಳನ್ನು ಹಬ್ಬಿಸುತ್ತಿದ್ದಾರೆ. ಸೇತುವೆ ತುಂಡಾಗಿದೆ, ಸುರಕ್ಷಿತವಾಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಸೇತುವೆ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು ಯಾವುದೇ ತೊಂದರೆಗಳು ಆಗಿಲ್ಲ. ತೇಲುವ ಸೇತುವೆಗೂ ಯಾವುದೇ ಹಾನಿಯಾಗಿಲ್ಲ. ಅಲ್ಲದೆ ತೇಲುವ ಸೇತುವೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಪ್ರವಾಸಿಗರು ಹಾಗೂ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿ ಕೊಡಬಾರದು ಎಂದು ತಿಳಿಸಿದರು.
ಇನ್ನು ಸೈಕ್ಲೋನ್ ಪ್ರಭಾವದಿಂದಾಗಿ ಸದ್ಯ ಮಲ್ಪೆ ಬೀಚ್ ನಲ್ಲಿ ತೇಲುವೆ ಸೇತುವೆ ಜೊತೆಗೆ ಇತರ ಜಲ ಕ್ರೀಡೆ ಹಾಗೂ ದ್ವೀಪ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು ಸೈಕ್ಲೋನ್ ಪ್ರಭಾವ ಕಡಿಮೆ ಆದ ಬಳಿಕ ಮತ್ತೆ ಆರಂಭಿಸಲಾಗುವುದು ಎಂದು ಸುದೇಶ್ ಶೆಟ್ಟಿ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…