ಕಾಪು, ಜ. ೩೦ : ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ, ಮಾಜಿ ಶಾಸಕ ದಿ| ಭಾಸ್ಕರ್ ಶೆಟ್ಟಿ ಅವರ ಪುತ್ರ ಧಾರ್ಮಿಕ, ಸಹಕಾರ, ಸಾಮಾಜಿಕ ಮತ್ತು ಜಾನಪದ ಕ್ಷೇತ್ರದ ಮುಖಂಡ ಮಲ್ಲಾರುಗುತ್ತು ಸುಬ್ರಹ್ಮಣ್ಯ ಶೆಟ್ಟಿ (೬೮) ಅವರು ಜ. ೩೦ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರ ಅಂತಿಮ ಕ್ರಿಯೆಯು ಜ. 30 ರಂದು ರಾತ್ರಿ 9.30 ಕ್ಕೆ ಮಲ್ಲಾರುಗುತ್ತುವಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಪತ್ನಿ ಕಾಪು ಪುರಸಭೆಯ ಸದಸ್ಯೆ ಶಾಂತಲತಾ ಎಸ್. ಶೆಟ್ಟಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕಾಪು ಸಾವಿರ ಸೀಮೆಯ ಒಂದನೇ ಗುತ್ತು ಮನೆತನದ ಗುತ್ತಿನಾರ್ ಆಗಿದ್ದ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾಗಿ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಟ್ರಸ್ಟಿಯಾಗಿ, ಮಲ್ಲಾರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾಗಿ, ಕಾಪು ಸಿ.ಎ. ಬ್ಯಾಂಕ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಕಾಪು ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ ಪೋಷಕರಾಗಿದ್ದ ಅವರು ಮಲ್ಲಾರು ಶ್ರೀ ಬ್ರಹ್ಮ ಬೆದರ್ಕಳ ಗರೊಡಿ, ಧೂಮಾವತಿ ದೈವಸ್ಥಾನದ ಗುತ್ತಿನಾರ್ ಆಗಿಯೂ ಸೇವೆ ಸಲ್ಲಿಸುತ್ತಿದ್ದರು. ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳ, ಭೂತ ಕೋಲ ಸಹಿತ ವಿವಿಧ ಆರಾಧನಾ ಸೇವೆಗಳಲ್ಲಿ ಮುಂಚೂಣಿಯ ಸೇವಾಸಕ್ತರಾಗಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…