ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನ ಸಭಾ ಕ್ಷೇತ್ರ ಯುವಮೋರ್ಚ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ೮ ವರ್ಷಗಳ ಸುದೀರ್ಘ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಕಾಪುವಿನಿಂದ ಬೈಕ್ ರ್ಯಾಲಿ ನಡೆಯಿತು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಾಥಕ್ಕೆ ಚಾಲನೆ ನೀಡಿ ಮಾತನಾಡಿ” ದೇಶ ಸುಭದ್ರವಾಗಿದೆ ಕೊಟ್ಟಿರುವ ಭರವಸೆಗಳನ್ನು ಕೇಂದ್ರ ಸರ್ಕಾರ ಪೂರ್ಣಗೊಳಿಸುತ್ತಿದೆ ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಲ್ಲಿ ಮೋದಿ ನೇತೃತ್ವದ ಸರ್ಕಾರ ಯಶಶ್ವಿಯಾಗಿದೆ ಹಾಗಾಗಿ ಈ ರ್ಯಾಲಿ ಅತ್ಯಂತ ಅರ್ಥಪೂರ್ಣವಾಗಿದೆ ಎಂದರು ಮಾತ್ರವಲ್ಲಿದೆ ಮುಂದಿನ ಎಲ್ಲಾ ಚುನಾವಣೆಗಳು ಕೂ ಬೆಜೆಪಿಗೆ ಪೂರಕವಾಗಲಿದೆ ಎಲ್ಲಾ ರಂಗದಲ್ಲೂ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದರು.
ಜಡಿ ಮಳೆಯನ್ನು ಲೆಕ್ಕಿಸದೆ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ ನೂರಾರು ಕಾರ್ಯಕರ್ತರು-
ಕಾಪು ಜನಾರ್ಧನ ದೇವಸ್ಥಾನದ ವಠಾರದಿಂದ ಬೈಕ್ ರ್ಯಾಲಿ ಆರಂಭಗೊಳ್ಳುತ್ತಿದ್ದAತೆ ಜೋರಾಗಿ ಮಳೆ ಸುರಿದರು ಕಾರ್ಯಕರ್ತರ ಹುಮ್ಮಸ್ಸು ಕುಗ್ಗದೆ ಬೈಕ್ ರ್ಯಾಲಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾಪು ಪೇಟೆಯಲ್ಲಿ ಸಮಾರೋಪಗೊಂಡಿತು.
ಈ ಸಂಧರ್ಭದಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್, ಮಟ್ಟಾರು ರತ್ನಾಕರ ಹೆಗ್ಡೆ, ಯಶ್ಪಾಲ್ ಸುವರ್ಣ,ಸುರೇಶ್ ಶೆಟ್ಟಿ ಗುರ್ಮೆ,ವೀಣಾ ಶೆಟ್ಟಿ, ಶ್ರೀಕಾಂತ್ ನಾಯಕ್, ಗೀತಾಂಜಲಿ ಸುವರ್ಣ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ವಿಕ್ಯಾತ್ ಶೆಟ್ಟಿ ಕಾರ್ಕಳ,ಕಾಪು ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ,ಪಧಾಧಿಕಾರಿಗಳಾದ ಶರತ್ ಶೆಟ್ಟಿ ಕುಂದಾಪುರ,ಸೋನು ಪೂಜಾರಿ ಪಾಂಗಾಳ,ಧೀರೆಶ್ ಡಿ ಪಿ ಮೂಳೂರು,ಚಿತ್ತನ್ ಮೂಳೂರು,ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ವ್ಯಕ್ತಿ ನಾಪತ್ತೆ ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ…
ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ…
ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ…
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ ಉಡುಪಿ ಜಿಲ್ಲೆಯಾದ್ಯಂತ…
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…