ವಡೋದರಾ: ಗುಜರಾತ್, ಮುಂಬೈ ಸೇರಿದಂತೆ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ವಡೋದರಾ ಏರ್ಪೋರ್ಟ್ ಬಂದ್ ಮಾಡಲಾಗಿದ್ದು, ರೈಲುಗಳ ಸಂಚಾರ ಸ್ಥಗಿತಗೊಂಡಿದೆ.
ಎರಡು ಡೊಮೆಸ್ಟಿಕ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಗುಜರಾತಿನಲ್ಲಿರುವ ವಡೋದರದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. 12 ಗಂಟೆಗಳಲ್ಲಿ 400 ಮಿ.ಮೀನಷ್ಟು ಮಳೆಯಾಗಿದೆ.
ರೈಲ್ವೆ ಹಳಿಗಳಲ್ಲಿ ನೀರು ನಿಂತಿರುವ ಕಾರಣ ರೈಲುಗಳ ಸಂಚಾರ ಕೂಡ ಸ್ಥಗಿತಗೊಂಡಿದೆ. ವಡೋದರದ ತಗ್ಗು ಪ್ರದೇಶದಲ್ಲಿ ವಾಸವಾಗಿರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಸರ್ಕಾರ ಸೂಚನೆ ನೀಡಿದೆ.
ವಡೋದರ ಪ್ರವಾಹ ಸ್ಥಿತಿ ಕುರಿತು ಸಚಿವ ವಿಜಯ್ ರೂಪಾನಿ ಬುಧವಾರ ಸಂಜೆ ಸಭೆ ಕರೆದಿದ್ದರು.ಅಹಮದಾಬಾದ್, ಸೂರತ್, ಪಂಚಮಹಲ್ ಸೇರಿದಂತೆ ಹಲವು ಕಡೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಮುಂದಿನ ಎರಡು ದಿನಗಳ ಕಾಲ ಗುಜರಾತ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಕರ್ನಾಟಕದಲ್ಲಿ ಕೂಡ ಮಳೆ ಮುಂದುವರೆದಿದ್ದು ಐದು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…