ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಭಾರೀ ಪ್ರಮಾಣದ ಅಕಾಲಿಕ ಮಳೆಯಾಗಿದೆ.
ಕೋಟಿ ಚೆನ್ನಯರ ಮೂಲ ಸ್ಥಾನವಾದ ಪುತ್ತೂರಿನ ಗೆಜ್ಜೆಗಿರಿ ನಂದನಬಿತ್ತಲ್’ನಲ್ಲಿ ಮಹಾಮಾತೆ ದೇಯಿ ಬೈದ್ಯೆತಿ ಮತ್ತು ಅವಳಿ ವೀರರ ಮೂಲಸ್ಥಾನ ಕ್ಷೇತ್ರದ ಬ್ರಹ್ಮಕಲಶೋತ್ಸವ ಕೂಡ ವೈಭವದಿಂದ ನಡೆಯುತ್ತಿದ್ದು, ಇದೇ ವೇಳೆ ಮಳೆರಾಯ ಇಳೆಗೆ ತಂಪೆರೆದಿದ್ದಾನೆ.
ಎಂದೂ ಕಾಣದ ಮಳೆ ಇಂದು ಮುಂಜಾನೆ ಇದ್ದಕಿದ್ದಂತೆ ಕಾಣಿಸಿಕೊಂಡು ಪುತ್ತೂರಿನ ಗೆಜ್ಜೆಗಿರಿ ನಂದನ ಬಿತ್ತಿಲ್ ಪರಮ ಪಾವನ ಕ್ಷೇತ್ರ ಎಂದು ಸಾಬೀತು ಪಡಿಸಿದೆ..
ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಬಿಸಿಲಿನ ತಾಪ ತೀವ್ರಗತಿಯಲ್ಲಿ ಏರಿತ್ತು. ಪರಿಣಾಮವಾಗಿ ಜನ-ಜಾನುವಾರುಗಳು, ಪ್ರಾಣಿ-ಪಕ್ಷಿಗಳು, ತಾಪ ತಾಳದೆ ನೀರು ನೆರಳನ್ನರಸುವಂತಾಗಿತ್ತು. ಆದರೆ ಇಂದು ಮುಂಜಾನೆ ವೇಳೆ ಇದ್ದಕ್ಕಿದ್ದಂತೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಗಾಳಿ ಬೀಸತೊಡಗಿದೆ. ಇದ್ದಕ್ಕಿದ್ದಂತೆ ಗುಡುಗು ಸಹಿತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಿತು.
ಮಂಗಳೂರು: ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ಕರೆತಂದ ಆರೋಪ; ಮೂವರ ವಿರುದ್ಧ ಪ್ರಕರಣ ದಾಖಲು ಮಂಗಳೂರು: ಮಂಗಳೂರಿನಲ್ಲಿ ಕೆಲಸಕ್ಕೆ ಬಾಂಗ್ಲಾದೇಶದ ಪ್ರಜೆಗಳನ್ನು…
ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ನೈತಿಕ ಪೊಲೀಸ್ಗಿರಿ ; ಐವರ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ : ದಿಡುಪೆಯ ಜಲಪಾತದಲ್ಲಿ ನಡೆದ…
ಬೆಂಗಳೂರು: ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಡಿಕೆಶಿ ಘೋಷಣೆ ಬೆಂಗಳೂರು: ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ…
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…