ಉಡುಪಿ: ಜಿಲ್ಲಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿಇಂದು ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಶನಿವಾರ ಬೆಳಗ್ಗೆ ಮಳೆ ಪ್ರಮಾಣ ಕೊಂಚ ತಗ್ಗಿದ್ದು, ಶುಕ್ರವಾರದ ಬಿರುಸಿನ ಮಳೆಯಿಂದಾಗಿ ಕುಂದಾಪುರ, ಬೈಂದೂರು ತಾಲೂಕಿನಲ್ಲಿ ಹಲವು ಮನೆಗಳಿಗೆ ಹಾನಿ ಸಂಭವಿಸಿದೆ. ಅಮಾಸೆಬೈಲು ಬಳ್ಮನೆ ಭಾಗದಲ್ಲೂ ಮನೆಗಳಿಗೆ ಹಾನಿಯಾಗಿದೆ.
ಕಾಪು ತಾಲೂಕಿನಲ್ಲಿ ಗಾಳಿ, ಮಳೆ ಮತ್ತು ನೆರೆಗೆ ಸಿಲುಕಿದ 35 ಮಂದಿಯನ್ನು ತಹಶೀಲ್ದಾರ್ ಡಾ| ಪ್ರತಿಭಾ ಆರ್. ನೇತೃತ್ವದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಟಪಾಡಿ ಮೂಡಬೆಟ್ಟು, ಏಣಗುಡ್ಡೆ, ನಡ್ಪಾಲು ಪಾದೆಬೆಟ್ಟು, ಪಡುಬಿದ್ರಿ ಕಲ್ಲಟ್ಟೆ ಮತ್ತು ಹೆಜಮಾಡಿ ಶಿವನಗರ ಪರಿಸರದ ಸಂತ್ರಸ್ತರನ್ನು ತಾಲೂಕು ಆಡಳಿತ, ಗೃಹರಕ್ಷಕ ದಳ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ಗಳ ನೇತೃತ್ವದಲ್ಲಿ ರಕ್ಷಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಾಲೂಕು ಆಡಳಿತ ಕೇಂದ್ರದ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 0820-2551444 ಅನ್ನು ಸಂಪರ್ಕಿಸುವಂತೆ ತಹಶೀಲ್ದಾರ್ ತಿಳಿಸಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…