ಉಡುಪಿ: ಜಿಲ್ಲಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿಇಂದು ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಶನಿವಾರ ಬೆಳಗ್ಗೆ ಮಳೆ ಪ್ರಮಾಣ ಕೊಂಚ ತಗ್ಗಿದ್ದು, ಶುಕ್ರವಾರದ ಬಿರುಸಿನ ಮಳೆಯಿಂದಾಗಿ ಕುಂದಾಪುರ, ಬೈಂದೂರು ತಾಲೂಕಿನಲ್ಲಿ ಹಲವು ಮನೆಗಳಿಗೆ ಹಾನಿ ಸಂಭವಿಸಿದೆ. ಅಮಾಸೆಬೈಲು ಬಳ್ಮನೆ ಭಾಗದಲ್ಲೂ ಮನೆಗಳಿಗೆ ಹಾನಿಯಾಗಿದೆ.
ಕಾಪು ತಾಲೂಕಿನಲ್ಲಿ ಗಾಳಿ, ಮಳೆ ಮತ್ತು ನೆರೆಗೆ ಸಿಲುಕಿದ 35 ಮಂದಿಯನ್ನು ತಹಶೀಲ್ದಾರ್ ಡಾ| ಪ್ರತಿಭಾ ಆರ್. ನೇತೃತ್ವದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಟಪಾಡಿ ಮೂಡಬೆಟ್ಟು, ಏಣಗುಡ್ಡೆ, ನಡ್ಪಾಲು ಪಾದೆಬೆಟ್ಟು, ಪಡುಬಿದ್ರಿ ಕಲ್ಲಟ್ಟೆ ಮತ್ತು ಹೆಜಮಾಡಿ ಶಿವನಗರ ಪರಿಸರದ ಸಂತ್ರಸ್ತರನ್ನು ತಾಲೂಕು ಆಡಳಿತ, ಗೃಹರಕ್ಷಕ ದಳ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ಗಳ ನೇತೃತ್ವದಲ್ಲಿ ರಕ್ಷಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಾಲೂಕು ಆಡಳಿತ ಕೇಂದ್ರದ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 0820-2551444 ಅನ್ನು ಸಂಪರ್ಕಿಸುವಂತೆ ತಹಶೀಲ್ದಾರ್ ತಿಳಿಸಿದ್ದಾರೆ.
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…
ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…
ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…
ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…