ಕಾಪು : ಪಣಿಯೂರು ನಾಂಜಾರು ಧರ್ಮ ಜಾರಂದಾಯ ದೈವಸ್ಥಾನದಲ್ಲಿ ಮಂಗಳವಾರ ನಡೆದ ವಾರ್ಷಿಕ ನೇಮೋತ್ಸವದ ಸಂದರ್ಭ ಸುರಿದ ಭಾರೀ ಗಾಳಿ – ಮಳೆಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಶಿಲಾಮಯ ದೈವಸ್ಥಾನಕ್ಕೆ 40 ಲಕ್ಷ ರೂ. ಗೂ ಮಿಕ್ಕಿದ ಹಾನಿಯುಂಟಾಗಿದೆ. ಘಟನೆಯ ಸಂದರ್ಭ ಉಪಸ್ಥಿತರಿದ್ದ ಸಾವಿರಾರು ಮಂದಿ ಪವಾಢ ಸಧೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದೈವಸ್ಥಾನದಲ್ಲಿ ಮಂಗಳವಾರ ರಾತ್ರಿ ವಾರ್ಷಿಕ ನೇಮೋತ್ಸವ ನಡೆಯುತ್ತಿದ್ದ ಸಂದರ್ಭ ಗುಡುಗು, ಮಿಂಚು ಸಹಿತ ಗಾಳಿ, ಮಳೆ ಸುರಿಯಲಾರಂಭಿಸಿತ್ತು. ಭಾರೀ ಮಳೆಯ ಕಾರಣದಿಂದಾಗಿ ದೈವದ ನೇಮವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿದ್ದು, ಮತ್ತೆ ಮುಂದುವರಿಸಲು ಯೋಚಿಸಲಾಗಿತ್ತು.
ದೈವಸ್ಥಾನದ ಆವರಣದಲ್ಲಿ ಬೆಳೆದು ನಿಂತಿದ್ದ ಸುಮಾರು 600 ವರ್ಷಗಳಿಗೂ ಹಿಂದಿನ ಬೃಹತ್ ಹಾಲೆ ಮರವು ಬುಡ ಸಮೇತವಾಗಿ ಉರುಳಿ ಬಿದ್ದಿದೆ. ದೈವಸ್ಥಾನದ ಮುಂಭಾಗದಲ್ಲಿದ್ದ ಮರ ಹಿಂಭಾಗದ ತೆಂಗಿನ ಮರಕ್ಕೆ ಬಿದ್ದು, ಆನಂತರ ದೈವಸ್ಥಾನದ ಮೇಲೆ ಬಿದ್ದು, ಬಳಿಕ ನೆಲಕ್ಕೆ ಬಿದ್ದಿತ್ತು.
ಜಾರಂದಾಯ ದೈವದ ನೇಮ ವೀಕ್ಷಿಸಲು ಬಂದಿದ್ದ ಹೆಜಮಾಡಿ ನಿವಾಸಿ ವಿಶ್ವನಾಥ್ (46) ಮರದಡಿಯಲ್ಲಿ ಸಿಲುಕಿ ಗಾಯಗೊಂಡಿದ್ದಾರೆ. ಭಾರೀ ಮಳೆ ಮತ್ತು ಗುಡುಗಿನ ನಡುವೆಯೇ ಸುಮಾರು ಒಂದೂವರೆ ಗಂಟೆಗಳ ಕಾಲ ಮರದಡಿಯಲ್ಲಿ ಸಿಲುಕಿ ಜೀವ ಭಯದಿಂದ ಒದ್ದಾಡುತ್ತಿದ್ದರು. ಸತತ ಒಂದೂವರೆ ಗಂಟೆಯ ಸತತ ಪ್ರಯತ್ನದಿಂದಾಗಿ ಎತ್ತಿ ರಕ್ಷಿಸಿ, ಅಂಬುಲೆನ್ಸ್ ಮೂಲಕ ಉಡುಪಿಗೆ ಕರೆದೊಯ್ದು, ನಂತರ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ.
ರಕ್ಷಣೆ ಪಡೆಯಲು ಓಡಿದವರ ಪೈಕಿ ಮಕ್ಕಳು ಮತ್ತು ಹಿರಿಯರು ಪಟ್ಟದ ಕುದುರೆ ಕೊಠಡಿ, ನೇಮ ಕಟ್ಟಿದವರು ಬಂಡಿ ಕುದುರೆ ಕೊಠಡಿ ಹಾಗೂ ದೈವದ ಪಾತ್ರಿಗಳು ಮತ್ತು ಚಾಕರಿ ವರ್ಗದವರು ನೈವಬೇದ್ಯ ಕೋಣೆಯಲ್ಲಿ ಆಶ್ರಯ ಪಡೆದಿದ್ದರು. ಬಂಡಿ ಕುದುರೆ ಕೊಠಡಿಗೆ ತಾಗಿಕೊಂಡೇ ಇರುವ ಪಟ್ಟದ ಕುದುರೆ ಮತ್ತು ನೈವೇದ್ಯ ಕೋಣೆಯನ್ನು ಸವರಿಕೊಂಡು ಬೃಹತ್ ಮರ ಉರುಳಿ ಬಿದ್ದಿತ್ತು. ಪಣಿಯೂರು ನಾಂಜಾರು ಶ್ರೀ ಧರ್ಮ ಜಾರಂದಾಯ ದೈವಸ್ಥಾನವು ಅತ್ಯಂತ ಕಾರಣಿಕ ಕ್ಷೇತ್ರವಾಗಿದ್ದು, ಇಲ್ಲಿ 2016ರಲ್ಲಿ ಸರ್ವರ ಸಹಕಾರದೊಂದಿಗೆ ಸಮಗ್ರ ಜೀರ್ಣೋದ್ಧಾರ ಕಾರ್ಯವನ್ನು ನಡೆಸಲಾಗಿತ್ತು. ಜೀರ್ಣೋದ್ಧಾರದ ಸಂದರ್ಭ ಹಾಲೆ ಮರವನ್ನು ಕಡಿಯುವ ಪ್ರಯತ್ನ ಮಾಡಲಾಗಿತ್ತಾದರೂ ದೈವದ ಅಭಯ ಮತ್ತು ಭಕ್ತರ ಅಪೇಕ್ಷೆಯಂತೆ ಮರವನ್ನು ಹಾಗೆಯೇ ಉಳಿಸಲಾಗಿತ್ತು.
ನಾಂಜಾರು ಜಾರಂದಾಯ ದೈವಸ್ಥಾನಕ್ಕೆ ಮರ ಬಿದ್ದು ಸುಮಾರು 30 ರಿಂದ 40 ಲಕ್ಷ ರೂ. ನಷ್ಟ ಉಂಟಾಗಿದ್ದು, ಶಿಲಾಮಯ ದೈವಾಲಯ ಮತ್ತು ಹಿತ್ತಾಳೆ ಮಾಡಿಗೂ ಸಂಪೂರ್ಣ ಹಾನಿಯುಂಟಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…