Featured

ಮಳೆಹಾನಿ ಸಮೀಕ್ಷೆ ಹಾಗೂ ಪರಿಹಾರ ಕಾರ್ಯ ಭರದಿಂದ ಸಾಗಿದೆ : ಮುಖ್ಯಮಂತ್ರಿ – Vishwanews24

ಮಳೆಹಾನಿ ಸಮೀಕ್ಷೆ ಹಾಗೂ ಪರಿಹಾರ ಕಾರ್ಯ ಭರದಿಂದ ಸಾಗಿದೆ : ಮುಖ್ಯಮಂತ್ರಿ

ಮೈಸೂರು: ‘ಮಳೆಯಿಂದ ಪ್ರಾಣಹಾನಿ, ಭೂ ಕುಸಿತ , ಬೆಳೆಹಾನಿ ಉಂಟಾಗಿದ್ದು, ಸಮೀಕ್ಷೆ ಹಾಗೂ ಪರಿಹಾರ ಕಾರ್ಯ ಭರದಿಂದ ಸಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೊಡಗು, ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲು ಮಂಗಳವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ₹ 739 ಕೋಟಿ ಬಿಡುಗಡೆಯಾಗಿದೆ. ಪರಿಹಾರ ಕ್ರಮಕ್ಕೆ ಹಣದ ಕೊರತೆಯಿಲ್ಲ. ನದಿ ಪಾತ್ರದಲ್ಲಿ ಸಂಭವಿಸುವ ಪ್ರವಾಹ ಹಾನಿ ತಡೆಗೆ ಶಾಶ್ವತ ಪರಿಹಾರಕ್ಕಾಗಿ‌ ಹಾಗೂ ಮನೆಗಳನ್ನು ಸ್ಥಳಾಂತರಿಸಲು ತಜ್ಞರ ಅಭಿಪ್ರಾಯ ಕೇಳಲಾಗಿದೆ’ ಎಂದರು.

‘ಈ ಬಾರಿಯ ಮಳೆಗಾಲದಲ್ಲಿ ಹಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಭೂ ಕುಸಿತವುಂಟಾಗಿದೆ. ಕೊಡಗಿನಲ್ಲಿ ಲಘು ಭೂಕಂಪ,‌ ಕರಾವಳಿಯಲ್ಲಿ ಕಡಲ ಕೊರೆತ ಹಾಗೂ ಉತ್ತರ ಕರ್ನಾಟಕದ ನದಿ ಪಾತ್ರಗಳಲ್ಲಿ ಪ್ರವಾಹ ಹಾನಿಯಾಗಿದೆ‌. ಭೂ ಕುಸಿತ ಸಂಭವಿಸುತ್ತಿರುವ ಸೂಕ್ಷ್ಮ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಲ್ಲಿ ನೆಲೆಸುವಂತೆ ಮಾಡಲು ಮನವೊಲಿಸಲಾಗುವುದು’ ಎಂದು ತಿಳಿಸಿದರು.

‘ಉಡುಪಿ, ಮಂಗಳೂರು, ಕೊಡಗು ಹಾಗೂ ಉತ್ತರ ಕನ್ನಡ ಸೇರಿದಂತೆ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಇಡೀ ಸರ್ಕಾರ ಮಳೆಹಾನಿ, ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡುತ್ತಿದೆ.‌ ವಿಪತ್ತು ಸಂಭವಿಸುತ್ತಿದ್ದರೂ ಸರ್ಕಾರ ಸಕ್ರಿಯವಾಗಿಲ್ಲವೆಂಬುದು ಸುಳ್ಳು’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ನಿಗಮ ಮಂಡಳಿಯಲ್ಲಿ ಒಂದೂವರೆ ವರ್ಷ ಸೇವೆ ಸಲ್ಲಿಸಿದವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಲು ಈಗಾಗಲೇ ತೀರ್ಮಾನ ಮಾಡಲಾಗಿದ್ದು, ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ’ ಎಂದೂ ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಇದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago