ಬೆಂಗಳೂರು : ಕಳೆದ ಮೂರು ವರ್ಷದಲ್ಲಿ ಸಂಭವಿಸಿದ ಮಳೆಯಿಂದ ಮನೆ ಕಳೆದುಕೊಂಡು ಪರಿಹಾರ ಪಡೆದವರ ಮನೆಗೆ ಈ ವರ್ಷ ಮತ್ತೆ ಹಾನಿಯಾದರೆ ಪರಿಹಾರ ಕೊಡುವಂತಿಲ್ಲ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.
ಈ ಬಗ್ಗೆ ಕೆಲವು ಜಿಲ್ಲಾಧಿಕಾರಿಗಳು ಪತ್ರ ಬರೆದು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದಿಂದ ಈ ಸ್ಪಷ್ಟನೆ ನೀಡಲಾಗಿದೆ.
2019, 2020, 2021 ನೇ ವರ್ಷದಲ್ಲಿ ಎ ಅಥವಾ ಬಿ ಕೆಟಗರಿಯಲ್ಲಿ ಪರಿಹಾರ ಪಡೆದಿರುವ ಸಂತ್ರಸ್ತರ ಮನೆಗಳಿಗೆ ಈ ಸಾಲಿನಲ್ಲಿ ಮತ್ತೆ ಪರಿಹಾರ ನೀಡುವುದಕ್ಕೆ ಅವಕಾಶವಿಲ್ಲ.
ಆದರೆ ಈ ವರ್ಷಗಳಲ್ಲಿ ಅಲ್ಪಸ್ವಲ್ಪ ಹಾನಿಗೊಳಗಾದ ಸಿ ಕೆಟಗರಿಯಲ್ಲಿ ಐವತ್ತು ಸಾವಿರ ರೂ. ಪಡೆದ ಮನೆಗಳಿಗೆ ಈ ಬಾರಿ ಎ,ಬಿ,ಸಿ ವಿಭಾಗದಲ್ಲಿ ಪರಿಹಾರ ಪಾವತಿಸಬಹುದು.
ವಾಸದ ಮನೆ ಅಧಿಕೃತವಾಗಿದ್ದರೆ ಮಾತ್ರ ನಿಯಮಾನುಸಾರ ಪರಿಹಾರ ನೀಡಬಹುದು. ಆದರೆ ಜಮೀನಿನಲ್ಲಿ ಕಟ್ಟಿರುವ ತೋಟದ ಮನೆ, ಸರಕಾರಿ ಜಾಗ, ಗೋಮಾಳಗಳಲ್ಲಿ ಕಟ್ಟಿರುವ ಮನೆ ಅನಧಿಕೃತವಾಗಿದ್ದಲ್ಲಿ ನಿಯಮಾನುಸಾರ ಪ್ರತಿಜ್ಞಾ ಪತ್ರ ಸ್ವೀಕರಿಸಿ 1 ಲಕ್ಷ ರೂ. ಎಕ್ಸ್ ಗ್ರೇಷಿಯಾ ಪಾವತಿಸಬಹುದು.
ಸರಕಾರಿ ವಸತಿ ಯೋಜನೆಗಳಲ್ಲಿ ನಿರ್ಮಾಣ ಕೆಲಸ ಪೂರ್ಣಗೊಂಡ ಮನೆಗಳು ಹಂಚಿಕೆಯಾಗಿ ಜನವಾಸ್ತವ್ಯ ಇದ್ದ ಸಂದರ್ಭದಲ್ಲಿ ಎ,ಬಿ,ಸಿ ವಿಭಾಗ ಮಾಡಿ ಪರಿಹಾರ ನೀಡಬೇಕು ಎಂದು ಆದೇಶ ಸ್ಪಷ್ಟಪಡಿಸಿದೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…