Featured

ಮಳೆ ಹಾನಿ : ಕಳೆದ ಮೂರು ವರ್ಷದಲ್ಲಿ ಪರಿಹಾರ ಪಡೆದವರಿಗೆ ಮತ್ತೆ ಪರಿಹಾರ ಇಲ್ಲ: ರಾಜ್ಯ ಸರ್ಕಾರ – Vishwanews24

ಮಳೆ ಹಾನಿ : ಕಳೆದ ಮೂರು ವರ್ಷದಲ್ಲಿ ಪರಿಹಾರ ಪಡೆದವರಿಗೆ ಮತ್ತೆ ಪರಿಹಾರ ಇಲ್ಲ: ರಾಜ್ಯ ಸರ್ಕಾರ

ಬೆಂಗಳೂರು : ಕಳೆದ ಮೂರು ವರ್ಷದಲ್ಲಿ ಸಂಭವಿಸಿದ ಮಳೆಯಿಂದ ಮನೆ ಕಳೆದುಕೊಂಡು‌ ಪರಿಹಾರ ಪಡೆದವರ ಮನೆಗೆ ಈ ವರ್ಷ ಮತ್ತೆ ಹಾನಿಯಾದರೆ ಪರಿಹಾರ‌ ಕೊಡುವಂತಿಲ್ಲ‌ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.

ಈ ಬಗ್ಗೆ ಕೆಲವು ಜಿಲ್ಲಾಧಿಕಾರಿಗಳು ಪತ್ರ ಬರೆದು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದಿಂದ ಈ ಸ್ಪಷ್ಟನೆ ನೀಡಲಾಗಿದೆ.

2019, 2020, 2021 ನೇ ವರ್ಷದಲ್ಲಿ ಎ ಅಥವಾ ಬಿ ಕೆಟಗರಿಯಲ್ಲಿ ಪರಿಹಾರ ಪಡೆದಿರುವ ಸಂತ್ರಸ್ತರ ಮನೆಗಳಿಗೆ ಈ ಸಾಲಿನಲ್ಲಿ‌ ಮತ್ತೆ ಪರಿಹಾರ‌ ನೀಡುವುದಕ್ಕೆ ಅವಕಾಶವಿಲ್ಲ.

ಆದರೆ ಈ ವರ್ಷಗಳಲ್ಲಿ ಅಲ್ಪಸ್ವಲ್ಪ ಹಾನಿಗೊಳಗಾದ ಸಿ ಕೆಟಗರಿಯಲ್ಲಿ ಐವತ್ತು ಸಾವಿರ ರೂ. ಪಡೆದ ಮನೆಗಳಿಗೆ ಈ ಬಾರಿ ಎ,ಬಿ,ಸಿ ವಿಭಾಗದಲ್ಲಿ ಪರಿಹಾರ ಪಾವತಿಸಬಹುದು.

ವಾಸದ ಮನೆ ಅಧಿಕೃತವಾಗಿದ್ದರೆ ಮಾತ್ರ ನಿಯಮಾನುಸಾರ ಪರಿಹಾರ ನೀಡಬಹುದು. ಆದರೆ ಜಮೀನಿನಲ್ಲಿ‌ ಕಟ್ಟಿರುವ ತೋಟದ ಮನೆ, ಸರಕಾರಿ ಜಾಗ, ಗೋಮಾಳಗಳಲ್ಲಿ ಕಟ್ಟಿರುವ ಮನೆ ಅನಧಿಕೃತವಾಗಿದ್ದಲ್ಲಿ ನಿಯಮಾನುಸಾರ ಪ್ರತಿಜ್ಞಾ ಪತ್ರ ಸ್ವೀಕರಿಸಿ 1 ಲಕ್ಷ ರೂ. ಎಕ್ಸ್ ಗ್ರೇಷಿಯಾ ಪಾವತಿಸಬಹುದು.

ಸರಕಾರಿ ವಸತಿ ಯೋಜನೆಗಳಲ್ಲಿ ನಿರ್ಮಾಣ ಕೆಲಸ ಪೂರ್ಣಗೊಂಡ ಮನೆಗಳು ಹಂಚಿಕೆಯಾಗಿ ಜನವಾಸ್ತವ್ಯ ಇದ್ದ ಸಂದರ್ಭದಲ್ಲಿ ಎ,ಬಿ,ಸಿ ವಿಭಾಗ ಮಾಡಿ ಪರಿಹಾರ ನೀಡಬೇಕು ಎಂದು ಆದೇಶ ಸ್ಪಷ್ಟಪಡಿಸಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago