ಬೆಂಗಳೂರು : ರಾಜ್ಯದಲ್ಲಿ ಹಲವೆಡೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ಥವ್ಯಸ್ಥವಾಗಿದ್ದು,ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಮನೆಗಳನ್ನ, ಜೀವ ಕಳೆದುಕೊಂಡ ಪರಿಸ್ಥಿತಿ ನಿರ್ಮಾಣವಾಗಿದೆ.
ಇಂದುವಿಧಾನಸಭೆ ಅಧಿವೇಶನದಲ್ಲಿ ಮಳೆ ಹಾನಿ ಕುರಿತು ಚರ್ಚೆ ನಡೆಸಿ, ಈ ವೇಳೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪರಿಹಾರ ಕ್ರಮಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮಳೆ ಹಾನಿ ಪರಿಹಾರ ಕ್ರಮಕ್ಕೆ ನಮ್ಮ ಬಳಿ ಹಣದ ಕೊರತೆ ಇಲ್ಲ ಎಂದು ತಿಳಿಸಿದರು.
ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತಿದೆ. ಸಂಪುಟ ಸಭೆಯಲ್ಲಿ ಹಾನಿ ಪರಿಹಾರ ಬಗ್ಗೆ ಚರ್ಚೆ ಮಾಡುತ್ತೇವೆ. ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಶೇ.21ರಷ್ಟು ಹೆಚ್ಚು ಮಳೆ ಆಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ ಶೇಕಡಾ 9ರಷ್ಟು ಹೆಚ್ಚು ಮಳೆಯಾಗಿದೆ. ಪರಿಹಾರ ಕ್ರಮಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ನೀಡಲಾಗಿದ್ದು, ಮಳೆ ಹಾನಿ ಪರಿಹಾರ ಕ್ರಮಕ್ಕೆ ನಮ್ಮ ಬಳಿ ಹಣದ ಕೊರತೆ ಇಲ್ಲ ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.
6 ಜಿಲ್ಲೆಗಳಲ್ಲಿ 5 ಎನ್ಡಿಆರ್ಎಫ್ ತುಕಡಿ ನಿಯೋಜಿಸಲಾಗಿದೆ. ಸಮಸ್ಯೆ ಉಂಟಾಗುವ 2,225 ಗ್ರಾಮಗಳನ್ನು ಗುರುತಿಸಲಾಗಿದ್ದು, 1,200ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಅಲ್ಲದೇ ತಾಲೂಕು ಮಟ್ಟದ ಅಧಿಕಾರಿ ಪ್ರತಿ ಗ್ರಾಮ ಪಂಚಾಯಿತಿಗೆ ಪ್ರವಾಹ ನಿರ್ವಹಣೆಗೆ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದು, ಗ್ರಾ.ಪಂ. ಟಾಸ್ಕ್ಫೋರ್ಸ್ಗೂ ಹಣ ಬಿಡುಗಡೆ ಮಾಡಲಾಗಿದೆ ಎಂದು ನುಡಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…