Featured

ಮಳೆ ಹಾನಿ ಪರಿಹಾರಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ಹಣ ಬಿಡುಗಡೆ  – vishwanews24

ಮಳೆ ಹಾನಿ ಪರಿಹಾರಕ್ಕೆ ಸರ್ಕಾರ ಹಣ ಬಿಡುಗಡೆ – ನಮ್ಮ ಬಳಿ ಹಣದ ಕೊರತೆ ಇಲ್ಲ : ಕೃಷ್ಣ ಬೈರೇಗೌಡ ಭರವಸೆ

ಬೆಂಗಳೂರು : ರಾಜ್ಯದಲ್ಲಿ ಹಲವೆಡೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ಥವ್ಯಸ್ಥವಾಗಿದ್ದು,ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಮನೆಗಳನ್ನ, ಜೀವ ಕಳೆದುಕೊಂಡ ಪರಿಸ್ಥಿತಿ ನಿರ್ಮಾಣವಾಗಿದೆ.

ಇಂದುವಿಧಾನಸಭೆ ಅಧಿವೇಶನದಲ್ಲಿ ಮಳೆ ಹಾನಿ ಕುರಿತು ಚರ್ಚೆ ನಡೆಸಿ, ಈ ವೇಳೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪರಿಹಾರ ಕ್ರಮಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮಳೆ ಹಾನಿ ಪರಿಹಾರ ಕ್ರಮಕ್ಕೆ ನಮ್ಮ ಬಳಿ ಹಣದ ಕೊರತೆ ಇಲ್ಲ ಎಂದು ತಿಳಿಸಿದರು.

ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನ‌ ಮಾಡುತ್ತಿದೆ. ಸಂಪುಟ ಸಭೆಯಲ್ಲಿ ಹಾನಿ ಪರಿಹಾರ ಬಗ್ಗೆ ಚರ್ಚೆ ಮಾಡುತ್ತೇವೆ. ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಶೇ.21ರಷ್ಟು ಹೆಚ್ಚು ಮಳೆ ಆಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ ಶೇಕಡಾ 9ರಷ್ಟು ಹೆಚ್ಚು ಮಳೆಯಾಗಿದೆ. ಪರಿಹಾರ ಕ್ರಮಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ನೀಡಲಾಗಿದ್ದು, ಮಳೆ ಹಾನಿ ಪರಿಹಾರ ಕ್ರಮಕ್ಕೆ ನಮ್ಮ ಬಳಿ ಹಣದ ಕೊರತೆ ಇಲ್ಲ ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.

6 ಜಿಲ್ಲೆಗಳಲ್ಲಿ 5 ಎನ್​ಡಿಆರ್​ಎಫ್ ತುಕಡಿ ನಿಯೋಜಿಸಲಾಗಿದೆ. ಸಮಸ್ಯೆ ಉಂಟಾಗುವ 2,225 ಗ್ರಾಮಗಳನ್ನು ಗುರುತಿಸಲಾಗಿದ್ದು, 1,200ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಟಾಸ್ಕ್ ಫೋರ್ಸ್​ ರಚನೆ ಮಾಡಲಾಗಿದೆ. ಅಲ್ಲದೇ ತಾಲೂಕು ಮಟ್ಟದ ಅಧಿಕಾರಿ ಪ್ರತಿ ಗ್ರಾಮ ಪಂಚಾಯಿತಿಗೆ ಪ್ರವಾಹ ನಿರ್ವಹಣೆಗೆ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದು, ಗ್ರಾ.ಪಂ. ಟಾಸ್ಕ್​ಫೋರ್ಸ್​ಗೂ ಹಣ ಬಿಡುಗಡೆ ಮಾಡಲಾಗಿದೆ ಎಂದು ನುಡಿದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

3 minutes ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

3 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

3 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

3 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

3 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

3 hours ago