ಮಂಗಳೂರು: ಬಿಜೈನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿ ಕಾರ್ಯಕರ್ತರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜನವರಿ 23ರಂದು ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್ ನಲ್ಲಿ ಕಲರ್ಸ್ ಯೂನಿಸೆಕ್ಸ್ ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮ ಸೇನೆಯ ಕಾರ್ಯಕರ್ತರು ದಾಳಿ ಎಸಗಿದ್ದರು. ಕೃತೃದ ಸಂದರ್ಭದಲ್ಲಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ಅಲ್ಲಿದ್ದ ಮಹಿಳಾ ಸಿಬಂದಿಗೆ ಜೀವ ಬೆದರಿಕೆ ಹಾಕಿದ್ದರು. ಘಟನೆ ಸಂಬಂಧಿಸಿ ಸೆಲೂನ್ ಮಾಲೀಕ ಸುಧೀರ್ ಶೆಟ್ಟಿ ಬರ್ಕೆ ಠಾಣೆಗೆ ದೂರು ನೀಡಿದ್ದರು.
ಬರ್ಕೆ ಪೊಲೀಸರು ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬಂಧಿಸಿದ್ದು ಮಂಗಳೂರಿನ 6ನೇ ಜೆಎಂಎಫ್ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಎಲ್ಲ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರವಾಗಿ ವಕೀಲ ಮಯೂರ ಕೀರ್ತಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಪ್ರಸಾದ್ ಅತ್ತಾವರ್ ಮತ್ತು ಇತರ ಹತ್ತು ಮಂದಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…
ಶಿರ್ವ : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ…
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…