Featured

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ : ಅಲಹಾಬಾದ್ ಹೈಕೋರ್ಟ್ – Vishwanews24

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ : ಅಲಹಾಬಾದ್ ಹೈಕೋರ್ಟ್

ಲಕ್ನೋ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

2021ರ ಡಿಸೆಂಬರ್ 3ರಂದು ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ (SDM) ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಮುಸ್ಲಿಂ ಮುಖಂಡ ಇರ್ಫಾನ್ ಆಜಾನ್‌ಗಾಗಿ ಧೋರನ್‌ಪುರ ಗ್ರಾಮದ ನೂರಿ ಮಸೀದಿಯಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಲು ಅನುಮತಿ ಕೋರಿದ್ದರು.

ನ್ಯಾಯಮೂರ್ತಿ ವಿವೇಕ್‌ಕುಮಾರ್ ಬಿರ್ಲಾ ಹಾಗೂ ನ್ಯಾಯಮೂರ್ತಿ ವಿಕಾಸ್ ಅವರಿದ್ದ ನ್ಯಾಯಪೀಠವು, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಸಾಂವಿಧಾನಿಕ ಹಕ್ಕಲ್ಲ ಎಂದು ಕಾನೂನು ಹೇಳುತ್ತದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿದಾರರು ತಮ್ಮ ಮನವಿಯಲ್ಲಿ, ಎಸ್‌ಡಿಎಂನ ಆದೇಶವು ಕಾನೂನುಬಾಹಿರ. ಇದು ಮೂಲಭೂತ ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಉಲ್ಲೇಖಿಸಿದ್ದರು.

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯ ವಿಚಾರವಾಗಿ ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಕೊಂಡಿದೆ. ಈಚೆಗಷ್ಟೇ ಉತ್ತರ ಪ್ರದೇಶದಲ್ಲೂ ಸಹ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದ 17,000 ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಪ್ರಮಾಣವನ್ನು ಮಿತಗೊಳಿಸುವಂತೆ ಸೂಚನೆ ನೀಡಿತ್ತು.

ಅನುಮತಿ ಪಡೆದ ಧ್ವನಿವರ್ಧಕಗಳನ್ನು ಮಾತ್ರವೇ ನಿಯಮಿತ ಶಬ್ಧದೊಂದಿಗೆ ಬಳಸುವಂತೆ ಸೂಚನೆ ನೀಡಿತ್ತು. ಇದರಿಂದ ಹಿಂದೂ-ಮುಸ್ಲಿಂ ದೇವಾಯಗಳಲ್ಲೂ ಪ್ರಸಾರವಾಗುತ್ತಿದ್ದ ಧಾರ್ಮಿಕ ಕೈಂಕರ್ಯಗಳು ಆವರಣಕ್ಕೆ ಮಾತ್ರ ಸೀಮಿತವಾಗಿತ್ತು.

 

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

5 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

6 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

7 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

7 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

8 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

8 hours ago