Featured

ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವುದನ್ನು ಕೂಡಲೇ ನಿಲ್ಲಿಸಬೇಕು : ಪ್ರಮೋದ್ ಮುತಾಲಿಕ್ -Vishwanews24

ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವುದನ್ನು ಕೂಡಲೇ ನಿಲ್ಲಿಸಬೇಕು : ಪ್ರಮೋದ್ ಮುತಾಲಿಕ್ -Vishwanews24

ಹುಬ್ಬಳ್ಳಿ : ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ‘ಅಜಾನ್’ (ಪ್ರಾರ್ಥನೆ) ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಧ್ವನಿವರ್ಧಕ ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದ್ದರೂ, ನಿಯಮ ಉಲ್ಲಂಘಿಸಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ದಿನಕ್ಕೆ ಐದು ಬಾರಿ ಪ್ರಾರ್ಥನೆ ಮಾಡುತ್ತಿದ್ದಾರೆ. ಇದರಿಂದ ನಿಶಬ್ದ(ಆಸ್ಪತ್ರೆ, ಶಿಕ್ಷಣ ಸಂಸ್ಥೆ ಮತ್ತು ಧಾರ್ಮಿಕ ಕೇಂದ್ರ) ವಲಯಗಳಲ್ಲಿ ಶಬ್ದ ಮಾಲಿನ್ಯ ವಾಗುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ, ಶ್ರೀರಾಮ ಸೇನೆಯಿಂದ ಧ್ವನಿವರ್ಧಕ ತೆರವು ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಕೋರ್ಟ್ ನಿಯಮವನ್ನೇ ಉಲ್ಲಂಘಿಸಿ ದೇಶದಲ್ಲಿ ಅಪಾಯಕಾರಿ ವಾತಾವರಣ ಸೃಷ್ಟಿಸಲಾಗುತ್ತಿದೆ. ಧಾರ್ಮಿಕ ಕಟ್ಟಡಗಳ ತೆರವು ಮಾಡುವುದರಲ್ಲೂ ಅನಧಿಕೃತ ದರ್ಗಾ ಮತ್ತು ಮಸೀದಿಗಳನ್ನು ತೆರವು ಮಾಡಲಿಲ್ಲ. ಈ ರೀತಿ ಮಾಡುವುದಾದರೆ ಪೊಲೀಸ್ ಠಾಣೆ, ಕೋರ್ಟ್‍ಗಳನ್ನು ಮುಚ್ಚಿಬಿಡಿ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಾತು ಮುಂದುವರೆಸಿದ ಅವರು, `ಮತಾಂತರ ತಡೆಗೆ ನಿರ್ದಿಷ್ಟ ಕಾನೂನು ರೂಪಿಸಬೇಕು. ಗೋಹತ್ಯೆ ನಿಷೇಧ ಕಾನೂನು ರೂಪಿಸಿದರೂ ಗೋಹತ್ಯೆ ನಿಂತಿಲ್ಲ. ಗೋಹತ್ಯೆ ತಡೆಯುವ ಹಿಂದೂ ಕಾರ್ಯಕರ್ತರು ಮಾತ್ರ ಕಾಣಿಸುತ್ತಾರೆ. ಗೋಹತ್ಯೆ ಏಕೆ ತಡೆಯುವುದಿಲ್ಲ? ಪೊಲೀಸರು ಕತ್ತೆ ಕಾಯುತ್ತಿದ್ದಾರೆಯೇ’. ಬಿಜೆಪಿ ಅವರನ್ನು ನಂಬಿ ಹಿಂದೂಪರ ಸಂಘಟನೆಗಳು ಹಾಗೂ ಹಿಂದೂಗಳು ಮತ ಹಾಕಿದ್ದಾರೆ ಎಂದು ಟೀಕಿಸಿದರು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

1 day ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

1 day ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

1 day ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

1 day ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

1 day ago