ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ವಜಾಗೊಳಿಸಲು ಬಿಎಸ್ವೈಗೆ ಸೂಚಿಸಬೇಕೆಂದು ಡಿ.ಕೆ.ಶಿವಕುಮಾರ್ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಟ್ಯಾಗ್ ಮಾಡಿ, ವಿಡಿಯೊ ತುಣುಕೊಂದನ್ನು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ‘ಕೋಮು ಸೌಹಾರ್ದಕ್ಕೆ ದಕ್ಕೆ ತರುವ ಉದ್ದೇಶದಿಂದ ಪ್ರಚೋದನಾಕಾರಿ ಹೇಳಿಕೆಗಳನ್ನು ಸಚಿವ ಈಶ್ವರಪ್ಪ ನೀಡಿದ್ದಾರೆ. ಅವರನ್ನು ವಜಾಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚಿಸಬೇಕೆಂದು ಪ್ರಧಾನಿ ಮೋದಿಯವರನ್ನು ನಾನು ಒತ್ತಾಯಿಸುತ್ತೇನೆ’ ಎಂದಿದ್ದಾರೆ.
ನಾವು ಭಾರತದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದೆ. ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಡಿಕೆಶಿ ಟ್ವೀಟ್ನಲ್ಲಿ ಒತ್ತಾಯಿಸಿದ್ದಾರೆ.
ಕಾಶಿ ವಿಶ್ವನಾಥ, ಮಥುರಾ ಶ್ರೀಕೃಷ್ಣ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ತೆರಳಿದರೆ ಹಿಂದೂಗಳ ಗುಲಾಮತನ ಭಾಸವಾಗುತ್ತದೆ. ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲೂ ಆಗದ ಸ್ಥಿತಿ ಇದೆ. ಅಲ್ಲಿರುವ ಮಸೀದಿಗಳು ಅಂತಹ ಮನೋಸ್ಥಿತಿ ಬಿಂಬಿಸುತ್ತವೆ ಎಂದು ಈಶ್ವರಪ್ಪ ಬುಧವಾರ ಹೇಳಿದ್ದರು.
ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿನ ಹಲವು ದೇವಸ್ಥಾನಗಳು ಧ್ವಂಸವಾಗಿವೆ. ಗುಲಾಮಗಿರಿಯ ಸಂತೇತವಾದ ಅಯೋಧ್ಯೆಯ ಮಸೀದಿ ತೆರವುಗೊಳಿಸಿದಂತೆ ಅಲ್ಲಿನ ಮಸೀದಿಗಳನ್ನು ತೆರವುಗೊಳಿಸಬೇಕಿದೆ. ಎಲ್ಲಾ ಶ್ರದ್ಧಾ ಕೇಂದ್ರಗಳೂ ಮಸೀದಿಗಳಿಂದ ಮುಕ್ತವಾಗಬೇಕಿದೆ ಎಂದು ತಿಳಿಸಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…