ಭೊಪಾಲ್: ಮಸೀದಿಯಲ್ಲಿ ನಮಾಜ್ ಮಾಡಲು ಜಾಗವಿಲ್ಲದಾಗ ಹಿಂದೂಗಳು ತಮ್ಮ ವ್ಯಾಪಾರವನ್ನು ನಿಲ್ಲಿಸಿ ತಮ್ಮ ಅಂಗಡಿ ಎದುರು ಪ್ರಾರ್ಥನೆ ಸಲ್ಲಿಸಲು ಜಾಗ ಮಾಡಿಕೊಟ್ಟು ಕೋಮು ಸೌಹರ್ದತೆ ಮೀರಿದ ಘಟನೆ ಶುಕ್ರವಾರ ಚೌಕ ಬಜಾರ್ ನಲ್ಲಿ ನಡೆದಿದೆ.
ಶುಕ್ರವಾರ ಜುಮಾ ಮಸೀದಿಯಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆಗಾಗಿ ಸೇರಿದ್ದಾರೆ. ಒಳಗಡೆ ಜಾಗವಿಲ್ಲದೆ ನೂರಾರು ಮಂದಿ ಮಸೀದಿ ಹೊರಗಡೆ ನಿಂತಿದ್ದಾರೆ.
ಈ ವೇಳೆ ಮಸೀದಿ ಎದುರು ಅಂಗಡಿ ನಡೆಸುತ್ತಿದ್ದ ಹಿಂದೂಗಳು ತಮ್ಮ ಅಂಗಡಿಯ ಎದುರು ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾರೆ.
ಜವಳಿ ಮಾಲೀಕ ವಿಕಾಸ್ ಅಗಾರವಾಲ್ ಮಾತನಾಡಿ, ಈ ತಿಂಗಳು ಮುಸ್ಲಿಮರಿಗೆ ಪವಿತ್ರವಾದ ತಿಂಗಳು. ಈ ಸಂದರ್ಭದಲ್ಲಿ ಅವರಿಗೆ ಮಸೀದಿಯಲ್ಲಿ ಜಾಗವಿಲ್ಲದಾಗ ನಮ್ಮ ವ್ಯಾಪಾರವನ್ನು ಮುಚ್ಚಿ ಅವರಿಗೆ ಸ್ಥಳಾವಕಾಶ ಮಾಡಿಕೊಡಲಾಯಿತು ಎಂದರು.
ಆಭರಣ ಮಾಲೀಕ ಅಲೋಕ್ ಮಿಠಲ್ ಮಾತನಾಡಿ, ಕಠಿಣ ಉಪವಾಸ ವೃತದಲ್ಲಿರುವ ಮುಸ್ಲಿಂ ಬಾಂಧವರಿಗೆ ನಾವು ಇಷ್ಟು ಮಾತ್ರ ಮಾಡಲು ಸಾಧ್ಯ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…