ಹೊಸದಿಲ್ಲಿ, : ಮಹಿಳೆಯರಿಗೂ ಮಸೀದಿಗಳ ಒಳಗೆ ನಮಾಜ್ ಮಾಡಲು ಅವಕಾಶ ನೀಡುವ ಮೂಲಕ ತಾರತಮ್ಯ ಧೋರಣೆ ಕೊನೆಗಾಣಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಕೆಯಾಗಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದೊಳಗೆ ಋುತುಪ್ರಾಯದ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದಾಗಲೇ ಮುಸ್ಲಿಂ ಮಹಿಳೆಯರ ಮಸೀದಿ ಪ್ರವೇಶದ ಅನುಮತಿಯ ಕೂಗೂ ಕೇಳಿ ಬಂದಿತ್ತು. ಈ ಬೆನ್ನಲ್ಲೇ, ಮುಸ್ಲಿಂ ಮಹಿಳೆಯರ ಮಸೀದಿ ಪ್ರವೇಶ ನಿರ್ಬಂಧದಿಂದ ಸಂವಿಧಾನದತ್ತವಾದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಈ ಅಕ್ರಮ ಹಾಗೂ ಅಸಾಂವಿಧಾನಿಕ ಧಾರ್ಮಿಕ ನಿಯಮವನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಮುಸ್ಲಿಂ ದಂಪತಿ ಅರ್ಜಿಯಲ್ಲಿ ಕೋರಿದ್ದಾರೆ.
ಮಹಿಳೆಯರಿಗೆ ಮಸೀದಿಯೊಳಗಿನ ನಮಾಜ್ ನಿಷೇಧ ಹೇರುವ ಅನಿಷ್ಟ ಪದ್ಧತಿ ಜಾರಿಯಲ್ಲಿದೆ. ಕುರಾನ್ ಅಥವಾ ಹದಿತ್ ಯಾವುದರಲ್ಲಿಯೂ ಲಿಂಗ ತಾರತಮ್ಯದ ಬೋಧನೆಗಳಿಲ್ಲ. ಮಹಿಳೆಯ ಘನತೆಗೆ ಧಕ್ಕೆ ತಂದಿರುವ ಈ ನಿಯಮವನ್ನು ತುರ್ತಾಗಿ ತೆರವುಗೊಳಿಸಬೇಕಿದೆ ಎಂದು ಅರ್ಜಿದಾರರ ಪರ ವಕೀಲ ಅಶುತೋಷ್ ದುಬೆ ಮನವಿ ಮಾಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…