ಹೊಸದಿಲ್ಲಿ, : ಮಹಿಳೆಯರಿಗೂ ಮಸೀದಿಗಳ ಒಳಗೆ ನಮಾಜ್ ಮಾಡಲು ಅವಕಾಶ ನೀಡುವ ಮೂಲಕ ತಾರತಮ್ಯ ಧೋರಣೆ ಕೊನೆಗಾಣಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಕೆಯಾಗಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದೊಳಗೆ ಋುತುಪ್ರಾಯದ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದಾಗಲೇ ಮುಸ್ಲಿಂ ಮಹಿಳೆಯರ ಮಸೀದಿ ಪ್ರವೇಶದ ಅನುಮತಿಯ ಕೂಗೂ ಕೇಳಿ ಬಂದಿತ್ತು. ಈ ಬೆನ್ನಲ್ಲೇ, ಮುಸ್ಲಿಂ ಮಹಿಳೆಯರ ಮಸೀದಿ ಪ್ರವೇಶ ನಿರ್ಬಂಧದಿಂದ ಸಂವಿಧಾನದತ್ತವಾದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಈ ಅಕ್ರಮ ಹಾಗೂ ಅಸಾಂವಿಧಾನಿಕ ಧಾರ್ಮಿಕ ನಿಯಮವನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಮುಸ್ಲಿಂ ದಂಪತಿ ಅರ್ಜಿಯಲ್ಲಿ ಕೋರಿದ್ದಾರೆ.
ಮಹಿಳೆಯರಿಗೆ ಮಸೀದಿಯೊಳಗಿನ ನಮಾಜ್ ನಿಷೇಧ ಹೇರುವ ಅನಿಷ್ಟ ಪದ್ಧತಿ ಜಾರಿಯಲ್ಲಿದೆ. ಕುರಾನ್ ಅಥವಾ ಹದಿತ್ ಯಾವುದರಲ್ಲಿಯೂ ಲಿಂಗ ತಾರತಮ್ಯದ ಬೋಧನೆಗಳಿಲ್ಲ. ಮಹಿಳೆಯ ಘನತೆಗೆ ಧಕ್ಕೆ ತಂದಿರುವ ಈ ನಿಯಮವನ್ನು ತುರ್ತಾಗಿ ತೆರವುಗೊಳಿಸಬೇಕಿದೆ ಎಂದು ಅರ್ಜಿದಾರರ ಪರ ವಕೀಲ ಅಶುತೋಷ್ ದುಬೆ ಮನವಿ ಮಾಡಿದ್ದಾರೆ.
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…