ಬೆಂಗಳೂರು, : ಕರ್ನಾಟಕ ವಕ್ಫ್ ಬೋರ್ಡ್,ಶಬ್ದ ಮಾಲಿನ್ಯವನ್ನು ತಡೆಗಟ್ಟವ ನಿಟ್ಟಿನಲ್ಲಿ, ಮಸೀದಿಗಳು ಮತ್ತು ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಕೆಗೆ ಕಡಿವಾಣ ಹಾಕುವಂತೆ ಸುತ್ತೋಲೆ ಹೊರಡಿಸಿದೆ.
ಅಝಾನ್ ಬಗ್ಗೆ ರಾಜ್ಯ ವಕ್ಫ್ ಮಂಡಳಿ ಯಾವುದೇ ನಿರ್ಬಂಧ ಹೇರಿಲ್ಲವಾದರೂ, ಧ್ವನಿವರ್ಧಕವನ್ನು ಅಝಾನ್ ಮತ್ತು ಸಾವು, ಸಮಾಧಿಯ ಸಮಯ, ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕು ಎಂದು ಹೇಳಿದೆ.
ಆಸ್ಪತ್ರೆಗಳು, ನ್ಯಾಯಾಲಯ, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ನಿಶ್ಯಬ್ದ ವಲಯಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸೋದು ಪರಿಸರ ಸಂರಕ್ಷಣಾ ಕಾಯ್ದೆಯನ್ವಯ ದಂಡನಾರ್ಹವಾಗಿದೆ. ಈ ಹಿನ್ನೆಲೆ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಮಸೀದಿ ಹಾಗೂ ದರ್ಗಾಗಳಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಉಳಿದ ಸಮಯಗಳಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಮನದಲ್ಲಿಟ್ಟು ಮೈಕ್ ಬಳಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಇದಲ್ಲದೆ ಸಲಾತ್, ಜುಮಾ ಖುತ್ಬಾ, ಬಯಾನ್ಸ್, ಧಾರ್ಮಿಕ ಇನ್ನಿತರ ಕಾರ್ಯಕ್ರಮಗಳಿಗೆ ಮಸೀದಿ ಅಥವಾ ದರ್ಗಾದ ಆವರಣದೊಳಗೆ ಇರುವ ಮೈಕ್ಗಳನ್ನು ಬಳಸಬೇಕು.ಯಾವುದೇ ಸಂದರ್ಭದಲ್ಲಿ ಶಬ್ದಗಳನ್ನು ಹೊರಸೂಸುವ ಪಟಾಕಿಗಳನ್ನು ಮಸೀದಿ, ದರ್ಗಾದ ಆವರಣದಲ್ಲಿ ಸುಡಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ವಕ್ಫ್ ಬೋರ್ಡ್ ಹೊರಡಿಸಿರುವ ಸುತ್ತೋಲೆಯ ಪ್ರಮುಖ ಸೂಚನೆಗಳು ಇಂತಿವೆ..
ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…