ಬೆಂಗಳೂರು, : ಕರ್ನಾಟಕ ವಕ್ಫ್ ಬೋರ್ಡ್,ಶಬ್ದ ಮಾಲಿನ್ಯವನ್ನು ತಡೆಗಟ್ಟವ ನಿಟ್ಟಿನಲ್ಲಿ, ಮಸೀದಿಗಳು ಮತ್ತು ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಕೆಗೆ ಕಡಿವಾಣ ಹಾಕುವಂತೆ ಸುತ್ತೋಲೆ ಹೊರಡಿಸಿದೆ.
ಅಝಾನ್ ಬಗ್ಗೆ ರಾಜ್ಯ ವಕ್ಫ್ ಮಂಡಳಿ ಯಾವುದೇ ನಿರ್ಬಂಧ ಹೇರಿಲ್ಲವಾದರೂ, ಧ್ವನಿವರ್ಧಕವನ್ನು ಅಝಾನ್ ಮತ್ತು ಸಾವು, ಸಮಾಧಿಯ ಸಮಯ, ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕು ಎಂದು ಹೇಳಿದೆ.
ಆಸ್ಪತ್ರೆಗಳು, ನ್ಯಾಯಾಲಯ, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ನಿಶ್ಯಬ್ದ ವಲಯಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸೋದು ಪರಿಸರ ಸಂರಕ್ಷಣಾ ಕಾಯ್ದೆಯನ್ವಯ ದಂಡನಾರ್ಹವಾಗಿದೆ. ಈ ಹಿನ್ನೆಲೆ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಮಸೀದಿ ಹಾಗೂ ದರ್ಗಾಗಳಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಉಳಿದ ಸಮಯಗಳಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಮನದಲ್ಲಿಟ್ಟು ಮೈಕ್ ಬಳಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಇದಲ್ಲದೆ ಸಲಾತ್, ಜುಮಾ ಖುತ್ಬಾ, ಬಯಾನ್ಸ್, ಧಾರ್ಮಿಕ ಇನ್ನಿತರ ಕಾರ್ಯಕ್ರಮಗಳಿಗೆ ಮಸೀದಿ ಅಥವಾ ದರ್ಗಾದ ಆವರಣದೊಳಗೆ ಇರುವ ಮೈಕ್ಗಳನ್ನು ಬಳಸಬೇಕು.ಯಾವುದೇ ಸಂದರ್ಭದಲ್ಲಿ ಶಬ್ದಗಳನ್ನು ಹೊರಸೂಸುವ ಪಟಾಕಿಗಳನ್ನು ಮಸೀದಿ, ದರ್ಗಾದ ಆವರಣದಲ್ಲಿ ಸುಡಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ವಕ್ಫ್ ಬೋರ್ಡ್ ಹೊರಡಿಸಿರುವ ಸುತ್ತೋಲೆಯ ಪ್ರಮುಖ ಸೂಚನೆಗಳು ಇಂತಿವೆ..
ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…