ಬೆಂಗಳೂರು, : ಕರ್ನಾಟಕ ವಕ್ಫ್ ಬೋರ್ಡ್,ಶಬ್ದ ಮಾಲಿನ್ಯವನ್ನು ತಡೆಗಟ್ಟವ ನಿಟ್ಟಿನಲ್ಲಿ, ಮಸೀದಿಗಳು ಮತ್ತು ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಕೆಗೆ ಕಡಿವಾಣ ಹಾಕುವಂತೆ ಸುತ್ತೋಲೆ ಹೊರಡಿಸಿದೆ.
ಅಝಾನ್ ಬಗ್ಗೆ ರಾಜ್ಯ ವಕ್ಫ್ ಮಂಡಳಿ ಯಾವುದೇ ನಿರ್ಬಂಧ ಹೇರಿಲ್ಲವಾದರೂ, ಧ್ವನಿವರ್ಧಕವನ್ನು ಅಝಾನ್ ಮತ್ತು ಸಾವು, ಸಮಾಧಿಯ ಸಮಯ, ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕು ಎಂದು ಹೇಳಿದೆ.
ಆಸ್ಪತ್ರೆಗಳು, ನ್ಯಾಯಾಲಯ, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ನಿಶ್ಯಬ್ದ ವಲಯಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸೋದು ಪರಿಸರ ಸಂರಕ್ಷಣಾ ಕಾಯ್ದೆಯನ್ವಯ ದಂಡನಾರ್ಹವಾಗಿದೆ. ಈ ಹಿನ್ನೆಲೆ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಮಸೀದಿ ಹಾಗೂ ದರ್ಗಾಗಳಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಉಳಿದ ಸಮಯಗಳಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಮನದಲ್ಲಿಟ್ಟು ಮೈಕ್ ಬಳಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಇದಲ್ಲದೆ ಸಲಾತ್, ಜುಮಾ ಖುತ್ಬಾ, ಬಯಾನ್ಸ್, ಧಾರ್ಮಿಕ ಇನ್ನಿತರ ಕಾರ್ಯಕ್ರಮಗಳಿಗೆ ಮಸೀದಿ ಅಥವಾ ದರ್ಗಾದ ಆವರಣದೊಳಗೆ ಇರುವ ಮೈಕ್ಗಳನ್ನು ಬಳಸಬೇಕು.ಯಾವುದೇ ಸಂದರ್ಭದಲ್ಲಿ ಶಬ್ದಗಳನ್ನು ಹೊರಸೂಸುವ ಪಟಾಕಿಗಳನ್ನು ಮಸೀದಿ, ದರ್ಗಾದ ಆವರಣದಲ್ಲಿ ಸುಡಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ವಕ್ಫ್ ಬೋರ್ಡ್ ಹೊರಡಿಸಿರುವ ಸುತ್ತೋಲೆಯ ಪ್ರಮುಖ ಸೂಚನೆಗಳು ಇಂತಿವೆ..
ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…