ಲಖನೌ: ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮೂವರು ಶಿಷ್ಯಂದಿರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆನಂದಗಿರಿ, ಆದ್ಯ ತಿವಾರಿ ಮತ್ತು ಸಂದೀಪ್ ತಿವಾರಿ ಎಂದು ಗುರುತಿಸಲಾಗಿದೆ. ಆನಂದಗಿರಿಯನ್ನು ಹರಿದ್ವಾರದಲ್ಲಿ ಹಾಗೂ ಇನ್ನಿಬ್ಬರನ್ನು ಪ್ರಯಾಗ್ರಾಜ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೂವರ ವಿರುದ್ಧ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಅಡಿ ಐಪಿಸಿ ಸೆಕ್ಷನ್ 306ರ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ಪಟ್ಟಣದಲ್ಲಿ ಬಘಾಂಬರಿ ಮಠದಲ್ಲಿನ ಕೊಠಡಿಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ನರೇಂದ್ರ ಗಿರಿ ಅವರ ದೇಹ ಪತ್ತೆಯಾಗಿತ್ತು. ಪೊಲೀಸ್ ಮೂಲಗಳ ಪ್ರಕಾರ ಗಿರಿ ಅವರ ಕೊಠಡಿಯಲ್ಲಿ ಎಂಟು ಪುಟಗಳ ಆತ್ಮಹತ್ಯಾ ಪತ್ರ ಪತ್ತೆಯಾಗಿದೆ.
ಈ ಪತ್ರದಲ್ಲಿ ಮಹಾಂತ ಅವರು ‘ನನ್ನ ಮೂವರು ಶಿಷ್ಯಂದಿರು ನನಗೆ ಕಿರುಕುಳ ನೀಡುತ್ತಿದ್ದರು. ನಾನು ತುಂಬಾ ಘನತೆ ಮತ್ತು ಗೌರವದಿಂದ ಜೀವನ ನಡೆಸುತ್ತಿದ್ದೆ. ಆದರೆ, ಇತ್ತೀಚೆಗೆ ಶಿಷ್ಯಂದಿರ ಕಿರುಕುಳದಿಂದಾಗಿ ಅವಮಾನ ಅನುಭವಿಸಿ ಬದುಕುವಂತಾಯಿತು‘ ಎಂದು ಬರೆದಿರುವುದಾಗಿ ಪ್ರಯಾಗ್ರಾಜ್ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪತ್ರದಲ್ಲಿ ತಮಗೆ ಕಿರುಕುಳ ನೀಡಿದ ಮೂವರು ಶಿಷ್ಯಂದಿರ ಹೆಸರನ್ನು ಬರೆದಿರುವುದಾಗಿ ಮೂಲಗಳು ತಿಳಿಸಿವೆ. ಈ ಪತ್ರದ ಆಧಾರದ ಮೇಲೆ ಪೊಲೀಸರು ಶಿಷ್ಯಂದಿರನ್ನು ಬಂಧಿಸಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…