Featured

ಮಹಂತ ನರೇಂದ್ರ ಗಿರಿ ಆತ್ಮಹತ್ಯೆ: ಅವರ ಮೂವರು ಶಿಷ್ಯಂದಿರ ಬಂಧನ -Vishwanews24

ಮಹಂತ ನರೇಂದ್ರ ಗಿರಿ ಆತ್ಮಹತ್ಯೆ: ಅವರ ಮೂವರು ಶಿಷ್ಯಂದಿರ ಬಂಧನ -Vishwanews24

ಲಖನೌ: ಅಖಿಲ ಭಾರತೀಯ ಅಖಾಡ ಪರಿಷತ್‌ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮೂವರು ಶಿಷ್ಯಂದಿರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಆನಂದಗಿರಿ, ಆದ್ಯ ತಿವಾರಿ ಮತ್ತು ಸಂದೀಪ್ ತಿವಾರಿ ಎಂದು ಗುರುತಿಸಲಾಗಿದೆ. ಆನಂದಗಿರಿಯನ್ನು ಹರಿದ್ವಾರದಲ್ಲಿ ಹಾಗೂ ಇನ್ನಿಬ್ಬರನ್ನು ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೂವರ ವಿರುದ್ಧ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಅಡಿ ಐಪಿಸಿ ಸೆಕ್ಷನ್‌ 306ರ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಪಟ್ಟಣದಲ್ಲಿ ಬಘಾಂಬರಿ ಮಠದಲ್ಲಿನ ಕೊಠಡಿಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ನರೇಂದ್ರ ಗಿರಿ ಅವರ ದೇಹ ಪತ್ತೆಯಾಗಿತ್ತು. ಪೊಲೀಸ್ ಮೂಲಗಳ ಪ್ರಕಾರ ಗಿರಿ ಅವರ ಕೊಠಡಿಯಲ್ಲಿ ಎಂಟು ಪುಟಗಳ ಆತ್ಮಹತ್ಯಾ ಪತ್ರ ಪತ್ತೆಯಾಗಿದೆ.

ಈ ಪತ್ರದಲ್ಲಿ ಮಹಾಂತ ಅವರು ‘ನನ್ನ ಮೂವರು ಶಿಷ್ಯಂದಿರು ನನಗೆ ಕಿರುಕುಳ ನೀಡುತ್ತಿದ್ದರು. ನಾನು ತುಂಬಾ ಘನತೆ ಮತ್ತು ಗೌರವದಿಂದ ಜೀವನ ನಡೆಸುತ್ತಿದ್ದೆ. ಆದರೆ, ಇತ್ತೀಚೆಗೆ ಶಿಷ್ಯಂದಿರ ಕಿರುಕುಳದಿಂದಾಗಿ ಅವಮಾನ ಅನುಭವಿಸಿ ಬದುಕುವಂತಾಯಿತು‘ ಎಂದು ಬರೆದಿರುವುದಾಗಿ ಪ್ರಯಾಗ್‌ರಾಜ್‌ನ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪತ್ರದಲ್ಲಿ ತಮಗೆ ಕಿರುಕುಳ ನೀಡಿದ ಮೂವರು ಶಿಷ್ಯಂದಿರ ಹೆಸರನ್ನು ಬರೆದಿರುವುದಾಗಿ ಮೂಲಗಳು ತಿಳಿಸಿವೆ. ಈ ಪತ್ರದ ಆಧಾರದ ಮೇಲೆ ಪೊಲೀಸರು ಶಿಷ್ಯಂದಿರನ್ನು ಬಂಧಿಸಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

10 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

11 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

11 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

11 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

11 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

12 hours ago