ಕಾಪು : ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಬುಧವಾರ 8ನೇ ವರ್ಷದ ರಾಶಿಪೂಜಾ ಮಹೋತ್ಸವ ಸಂಪನ್ನಗೊಂಡಿತ್ತು. ಬುಧವಾರ ಸೂರ್ಯೋದಯದಿಂದ ಗುರುವಾರ ಬೆಳಗ್ಗಿನ ಜಾವದ ಸೂರ್ಯೋದಯದವರೆಗೆ ಸತತವಾಗಿ 24 ಗಂಟೆಗಳ ಕಾಲ ಜರುಗಿದ ಈ ಪೂಜಾ ಮಹೋತ್ಸವ ವಿಶೇಷವಾಗಿ ನೃತ್ಯ, ಸಂಗೀತ, ವಾದ್ಯ, ಭಜನೆ ಕೀರ್ತನೆ ಸಹಿತ ಅಷ್ಟಾವಧಾನ ಪೂಜೆಯೊಂದಿಗೆ ಸಂಪನ್ನಗೊಂಡಿತು.
ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಶ್ರೀಶ ತಂತ್ರಿ ನೇತೃತ್ವದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಪಂಜ ಭಾಸ್ಕರ್ ಭಟ್ ಉಪಸ್ಥಿತಿಯಲ್ಲಿ ನಡೆದ ಮಹೋತ್ಸವದಲ್ಲಿ ವೈದಿಕರಾದ ಶ್ರೀನಿವಾಸ ತಂತ್ರಿ ಹಾಗೂ ಅರ್ಚಕ ವರ್ಗದವರು ರಾಶಿ ಕಲಶಾವಧಿ ವಾಸ ಭಾರತೀ ಪೂಜೆ, ಬಲಿ ಸಹಿತ ನಾನಾ ಧಾರ್ಮಿಕ ಅನುಷ್ಠಾನ ನೆರವೇರಿಸಿದರು. ಎಲ್ಲ ೧೨ ರಾಶಿಗಳಿಗೆ ಪ್ರತ್ಯೇಕ ಪ್ರತ್ಯೇಕವಾಗಿ ನಡೆದ ಪೂಜೆಯಲ್ಲಿ ಪರಿಸರದ ಗಣ್ಯರು ಮತ್ತು ಸಮಾಜದ ಸಂಘಟನೆಗಳು ಸೇವಾಕರ್ತರಾಗಿದ್ದರು. ಅನೇಕ ಗಣ್ಯರು ಭೇಡಿ ನೀಡಿ ದೇವರ ದರ್ಶನ ಪಡೆದು ಮಹೋತ್ಸವದಲ್ಲಿ ಪಾಲ್ಗೋಂಡರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ಎಂ. ಬಂಗೇರ, ಕಾರ್ಯನಿರ್ವಹಣಾಧಿಕಾರಿ ರವಿಶಂಕರ್ ಕೆ., ರಾಶಿಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ದೇವಳದ ಗೌರವ ಸಲಹೆಗಾರನಾದ ಕೆ.ಪಿ.ಆಚಾರ್ಯ, ರಾಶಿಪೂಜಾ ಸಮಿತಿ ಸಲಹೆಗಾರರಾದ ಶಶಿಧರ ಕೆ. ಶೆಟ್ಟಿ ಎರ್ಮಾಳ್, ಡಾ. ಕೆ. ಪ್ರಭಾಕರ ಶೆಟ್ಟಿ, ರವಿ ಎಸ್. ಶೆಟ್ಟಿ, ಎಂ. ಶಶಿಧರ ಶೆಟ್ಟಿ , ಶ್ರೀನಿವಾಸ ತಂತ್ರಿ,ಸಮಿತಿ ಕಾರ್ಯದರ್ಶಿ ರತ್ನಾಕರ್ ಹೆಗ್ಡೆ ಕಲ್ಯಾ, ಕೋಶಾಧಿಕಾರಿ ಶ್ರೀಕರ ಶೆಟ್ಟಿ ಕಲ್ಯಾ, ವ್ಯವಸ್ಥಾಪನಾ ಸಮಿತಿ, ರಾಶಿ ಪೂಜಾ ಮಹೋತ್ಸವ ಸಮಿತಿ, ದೇವಳದ ಜೀರ್ಣೋದ್ದಾರ ಸಮಿತಿ, ಪದಾಧಿಕಾರಿಗಳು ಮತ್ತು ಸದಸ್ಯರು, ಕಾಪು ಸಾವಿರ ಸೀಮೆಯ ಹತ್ತು ಸಮಸ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
photos by: Rupam kaup
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…