ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವದ ಅತೀ ದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ಕಾರ್ಯಕ್ರಮವಾದ ಆಯುಷ್ಮಾನ್ ಭಾರತ್ ಯೋಜನೆಗೆ ಜಾರ್ಖಂಡ್ನ ರಾಂಚಿಯಲ್ಲಿ ಚಾಲನೆ ನೀಡಲಿದ್ದಾರೆ.
ಈ ಯೋಜನೆಯಿಂದ ಸುಮಾರು 50 ಕೋಟಿ ಭಾರತೀಯರು ಪ್ರಯೋಜನ ಪಡೆಯಲಿದ್ದಾರೆ. ಆರ್ಥಿಕವಾಗಿ ಹಿಂದುಳಿದ 10 ಕೋಟಿ ಕುಟುಂಬಗಳನ್ನು ತಲುಪಬೇಕು ಎನ್ನುವ ಗುರಿಯನ್ನು ಹೊಂದಿದೆ.
ಈ ಯೋಜನೆಯನ್ನು ಪ್ರಧಾನ ಮಂತ್ರಿ ಜನ್ ಆರೋಗ್ಯ ಅಭಿಯಾನ ಎಂದು ಸಹ ಕರೆಯಲಾಗುತ್ತದೆ. ಪ್ರಧಾನಿಯವರು ಇಂದು ಯೋಜನೆಗೆ ಚಾಲನೆ ನೀಡಿದರು ಸಹ ಅದು ಅಧಿಕೃತವಾಗಿ ಸೆಪ್ಟೆಂಬರ್ 25 ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದಂದು ಜಾರಿಗೆ ಬರಲಿದೆ.
ಈ ಯೋಜನೆಯಡಿ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸಿಗಲಿದೆ. ಸರ್ಕಾರ ಒಂದು ಬಡ ಕುಟುಂಬಕ್ಕೆ ವಾರ್ಷಿಕ 5 ಲಕ್ಷವರೆಗೆ ಆಸ್ಪತ್ರೆ ವೆಚ್ಚ ಭರಿಸುತ್ತದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…