ಮುಂಬೈ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಇನ್ನೂ ನಡೆಯುತ್ತಿದೆ. ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ ನಡೆಯಲಿದೆ.
ವೀಕ್ಷಕರು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ವಿಜಯ್ ರೂಪಾಣಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ.
ಅಭಿಪ್ರಾಯ ಸಂಗ್ರಹದ ಬಳಿಕ ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ನಾಳೆ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆ ನಡೆದಿದೆ.
ಏಕನಾಥ್ ಶಿಂಧೆ ಮನವೊಲಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಡಿಸಿಎಂ ಹುದ್ದೆಗೆ ಬಿಜೆಪಿ ನಾಯಕರು ಮನವೊಲಿಸಿದ್ದಾರೆ. ದೇವೇಂದ್ರ ಪಡ್ನವೀಸ್ ಸೇರಿದಂತೆ ಹಲವು ಪ್ರಮುಖರಿಂದ ಮನವೊಲಿಕೆ ಕಾರ್ಯ ಯಶಸ್ವಿಯಾಗಿದೆ.
ಸುದೀರ್ಘ ಸಭೆಗಳ ಬಳಿಕ ಡಿಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ಒಪ್ಪಿಕೊಂಡಿದ್ದಾರೆ. ಹೀಗಾಗಿ, ದೇವೇಂದ್ರ ಪಡ್ನವೀಸ್ ಸಿಎಂ ಆಗಿ ಆಯ್ಕೆಯಾಗುವ ಸಾಧ್ಯತೆ ಇದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…