Featured

ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ – ತಿದ್ದುಪಡಿ ಮಾಡಿ ಹೆಸರು ಅಳಿಸುತ್ತಿರುವುದು ಘೋರ ಅಪರಾಧ : ರಮಾನಾಥ ರೈ – vishwanews24

ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ  : ಹೆಸರು ಬದಲಾವಣೆ ಗಾಂಧೀಜಿ ಬಗೆಗಿನ ಬಿಜೆಪಿ ಧೋರಣೆ ಏನೆಂಬುದು ಇದರಿಂದ ಸ್ಪಷ್ಟ : ರಮಾನಾಥ ರೈ

ಮಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರು ಅಳಿಸುತ್ತಿರುವುದು ಘೋರ ಅಪರಾಧವಾಗಿದ್ದು, ಕೇಂದ್ರ ಸರಕಾರದ ಈ ನಡೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಖಂಡಿಸುವುದಾಗಿ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯುಪಿಎ ಆಡಳಿತಾವಧಿಯಲ್ಲಿ ನೀಡಲಾದ ಮಹತ್ತರ ಯೋಜನೆ ಇದಾಗಿದ್ದು, ಜಗತ್ತು ಈ ಕಾರ್ಯಕ್ರಮವನ್ನು ಮೆಚ್ಚಿದೆ ಎಂದರು.

ಈ ಯೋಜನೆ ಮಂಡಿಸಲಾದ ಸಂದರ್ಭ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಭ್ರಷ್ಟಾಚಾರ ಕಾರ್ಯಕ್ರಮ ಎಂದು ಹೇಳಿದ್ದವು. ಮಹಾತ್ಮಗಾಂಧಿ ಹೆಸರಿನಲ್ಲಿ ಜಾರಿಗೆ ಬಂದಿದ್ದ ಈ ಯೋಜನೆ ಸಮಾಜದ ಬಡ, ರೈತ, ಕಾರ್ಮಿಕ ವರ್ಗಕ್ಕೆ ಮನರೇಗಾ ಕಾರ್ಯಕ್ರಮದಿಂದ ಅನುಕೂಲವಾಗಿದೆ. ಇದೀಗ ಮಹಾತ್ಮ ಗಾಂಧಿ ಹೆಸರನ್ನು ಕೈಬಿಡುವ ಮೂಲಕ ಅವಮಾನ ಮಾಡಲಾಗಿದೆ. ಈಗಾಗಲೇ ಮಹಾತ್ಮಗಾಂಧಿ ವಿರುದ್ಧ ಸಂಘ ಪರಿವಾರದ ಶಕ್ತಿಗಳಿಂದ ನಡೆಯುತ್ತಿರುವ ಮಹಾತ್ಮಗಾಂಧಿ ವಿರುದ್ಧದ ಅವಹೇಳನದ ಭಾಗ ಇದಾಗಿದೆ ಎಂದು ಅವರು ಆರೋಪಿಸಿದರು.

ಹಿಂದೆ ಈ ಯೋಜನೆಯಡಿ ವೇತನವನ್ನು ಕೇಂದ್ರ ಸರಕಾರದಿಂದ ಪಾವತಿಸಲಾಗುತ್ತಿತ್ತು. ಈಗ ಕೇಂದ್ರ ಶೇ.60, ರಾಜ್ಯ ಶೇ.40 ಪಾಲು ಎಂದು ಹೇಳಿರುವುದು ಈ ಯೋಜನೆಯ ಗಾಂಧೀಜಿ ಹೆಸರು ಬದಲಾವಣೆಯ ಜತೆಗೆ ಯೋಜನೆಯನ್ನು ದುರ್ಬಲಗೊಳಿಸುವ ಯತ್ನವೂ ನಡೆದಿದೆ. ಗಾಂಧೀಜಿ ಬಗೆಗಿನ ಬಿಜೆಪಿ ಧೋರಣೆ ಏನೆಂಬುದು ಇದರಿಂದ ಸ್ಪಷ್ಟವಾಗಿದೆ. ಇತಿಹಾಸವನ್ನು ತಿದ್ದುವ ಕೆಲಸ ಬಿಜೆಪಿಯಿಂದ ನಡೆಯುತ್ತಿದ್ದು, ದೇಶಕ್ಕಾಗಿ ತ್ಯಾಗ ಮಾಡಿದವರನ್ನು, ಇತಿಹಾಸದ ಪುಟಗಳಿಂದ ಅಳಿಸುವ ಕಾರ್ಯ ನಡೆಯುತ್ತಿದೆ. ಪ್ರಪಂಚದ 80 ದೇಶಗಳಲ್ಲಿ ಗಾಂಧೀಜಿ ಪ್ರತಿಮೆ ಮೂಲಕ ಗೌರವ ಸಲ್ಲಿಸಲಾಗುತ್ತದೆ. ಪ್ರಧಾನಿ ಮೋದಿಯವರು ಬೇರೆ ದೇಶಕ್ಕೆ ಹೋದಾಗ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಾರೆ. ಆದರೆ ದೇಶದಲ್ಲಿ ಅವರ ಹೆಸರನ್ನೇ ಅಳಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago