Featured

ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು  ಹೆಚ್ಚಾಗುತ್ತಿದ್ದಾರೆ : ಸಿದ್ದರಾಮಯ್ಯ -Vishwanews24

ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು  ಹೆಚ್ಚಾಗುತ್ತಿದ್ದಾರೆ : ಸಿದ್ದರಾಮಯ್ಯ -Vishwanews24

ಬೆಂಗಳೂರು: ‘ಮಹಾತ್ಮಾಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು  ಹೆಚ್ಚಾಗುತ್ತಿದ್ದಾರೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದರು.

ಮಹಾತ್ಮಾಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಮಹಾತ್ಮಾಗಾಂಧೀಜಿಯವರು ಯಾರನ್ನೂ ಶತ್ರುಗಳು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆಮಾಡಲಿಲ್ಲ. ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಎಂಬ ದೇಶದ್ರೋಹಿ ಗಾಂಧೀಜಿಯವರನ್ನು ಹತ್ಯೆಮಾಡಿದ್ದ ಎಂಬುದನ್ನು ನಾವು ಮರೆಯಬಾರದು’ ಎಂದರು.

‘ಮಹಾತ್ಮಾಗಾಂಧೀಜಿಯವರು ಹುತಾತ್ಮರಾದ ದಿನವನ್ನು ನಾವು ಹುತಾತ್ಮರ ದಿನವಾಗಿ ಆಚರಿಸುತ್ತಿದ್ದೇವೆ. ಈ ಮೂಲಕ ಸ್ವಾತಂತ್ರ್ಯಹೋರಾಟಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸಾವಿರಾರು ದೇಶಭಕ್ತರಿಗೆ ಗೌರವವನ್ನು ಅರ್ಪಿಸುತ್ತಿದ್ದೇವೆ. ಇವರಲ್ಲಿ ಬಹಳಷ್ಟು ಹುತಾತ್ಮರು ಅನಾಮಿಕರಾಗಿಯೇ ಉಳಿದಿದ್ದಾರೆ. ಅವರ ನಿಸ್ವಾರ್ಥವಾದ ದೇಶಭಕ್ತಿ ನಮಗೆಲ್ಲರಿಗೂ ಆದರ್ಶವಾಗಬೇಕು’

‘ಗಾಂಧೀಜಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸ್ವಾತಂತ್ರ್ಯಹೋರಾಟವನ್ನು ಮುನ್ನಡೆಸಿದ್ದರೂ ಅಂತರಂಗದಲ್ಲಿ ಅವರೊಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ  ತಮ್ಮ  ಜೀವನ ಪಯಣ ನಡೆಸಿದ ಗಾಂಧೀಜಿ ಮಹಾನ್ ಸಮಾಜ ಪರಿವರ್ತಕ’.

‘ಗಾಂಧೀಜಿ ಜೀವನ ಮತ್ತು ಸಾಧನೆ ಹೇಗೆ ನಮ್ಮ ಆದರ್ಶಪ್ರಾಯವೋ, ಅದೇ ರೀತಿ ಅವರ ಸಾವು ಕೂಡಾ ನಮಗೆ ಪಾಠವಾಗಿದೆ. ಗಾಂಧೀಜಿಯವರು ಕೇವಲ ಸ್ವಾತಂತ್ರ್ಯಕ್ಕಾಗಿ, ಅಸ್ಪೃರ್ಶತೆಯ ನಿವಾರಣೆಗಾಗಿ, ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ಮಾತ್ರ ಹೋರಾಡಲಿಲ್ಲ. ಅವರು ಬಹುಮುಖ್ಯವಾದ ಕೋಮುಸಾಮರಸ್ಯಕ್ಕಾಗಿ ಕೂಡಾ ತನ್ನ ಕೊನೆ ಉಸಿರಿರುವ ತನಕ ಹೋರಾಡಿದರು. ಈ ತನ್ನ ಹೋರಾಟಕ್ಕಾಗಿಯೇ ತನ್ನ ಪ್ರಾಣವನ್ನು ಕಳೆದುಕೊಂಡರು.

ಆದರೆ, ಗಾಂಧೀಜಿ ಅವರು ಯಾವ ಉದ್ದೇಶಕ್ಕಾಗಿ ಹೋರಾಡಿದರೋ, ಆ ಕೋಮುಸೌಹಾರ್ದತೆಯ ಸ್ಥಾಪನೆಯ ಕಾರ್ಯ ಇನ್ನೂ ಅಪೂರ್ಣವಾಗಿಯೇ ಉಳಿದಿದೆ.

ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು : ಮುಖ್ಯಮಂತ್ರಿ BSY -Vishwanews24

‘ಗಾಂಧೀಜಿಯವರ ಚಿಂತನೆಗಳು ಒಂದೊಂದಾಗಿ ನಮ್ಮ ಕಣ್ಣಮುಂದೆಯೇ ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಧರ್ಮಧರ್ಮಗಳ ನಡುವೆ ವೈಮನಸ್ಸು ಹುಟ್ಟಿಸಿ, ಗಲಭೆ ಸೃಷ್ಟಿಸಿ ಅದರ ಮೂಲಕ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ. ‘

‘ಸ್ವಾತಂತ್ರ್ಯ ಹೋರಾಟದ ಮೂಲಕ ಬ್ರಿಟಿಷರ ಗುಲಾಮಗಿರಿಯಿಂದ ನಮ್ಮನ್ನು ಬಿಡುಗಡೆಗೊಳಿಸಿ ನಮಗೆ ರಾಜಕೀಯ ಸ್ವಾತಂತ್ರ್ಯವನ್ನು ನಮಗೆ ಗಳಿಸಿಕೊಟ್ಟರು. ಈಗ ನಾವು ನವವಸಾಹತುಷಾಹಿಗಳ ವಿರುದ್ಧ ಹೋರಾಡಿ ಸಾಮಾಜಿಕ ಸ್ವಾತಂತ್ರ್ಯವನ್ನು ಪಡೆಯಲು ಇನ್ನೊಂದು ಸ್ವಾತಂತ್ರ್ಯಹೋರಾಟ ನಡೆಸಬೇಕಾಗಿದೆ.’ ಎಂದರು.

‘ಇಂದಿನ ಭಾರತದಲ್ಲಿ ಅತ್ಯಂತ ಶೋಷಿತ ಸಮುದಾಯಗಳಾದ ರೈತರು,ಕಾರ್ಮಿಕರು, ಮಹಿಳೆಯರು,ದಲಿತರು ಮಾತ್ರವಲ್ಲ ಈ ದೇಶದ ಯಾವ ಸಾಮಾನ್ಯ ಮನುಷ್ಯ ಕೂಡಾ ಸುರಕ್ಷಿತವಾಗಿಲ್ಲ. ಈ ಅನ್ಯಾಯ,ಶೋಷಣೆ,ಅವಮಾನದ ವಿರುದ್ದ ನಾವು ದನಿ ಎತ್ತದೆ ಹೋದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ’.

‘ಇಂದು ಕೃಷಿ ವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ಇದು ಹಿಂಸೆಯನ್ನು ಕೂಡಾ ಅಹಿಂಸೆಯ ಮೂಲಕ ಹೋರಾಡಿ ಗೆದ್ದ ಮಹಾತ್ಮಗಾಂಧೀಜಿ ಅವರಿಗೆ ತೋರುವ ಅಗೌರವವಾಗಿದೆ’ ಎಂದು ಅವರು ಅಭಿಪ್ರಾಯ ಪಟ್ಟರು.

ಮಂಗಳೂರು: ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago