ನವದೆಹಲಿ : ಮಹಾತ್ಮಾ ಗಾಂಧಿ 150 ನೇ ವರ್ಷದ ಅಂಗವಾಗಿ ಅಕ್ಟೋಬರ್ 2ರ ರಿಂದ ಅಕ್ಟೋಬರ್ 31ರ ವರೆಗೆ ಬಿಜೆಪಿ ಸಂಸದರು ತಮ್ಮ ಕ್ಷೇತ್ರಗಳಲ್ಲಿ 150 ಕಿ.ಮೀ. ಪಾದಯಾತ್ರೆಯನ್ನು ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮೋದಿಯವರ ಹೇಳಿಕೆಯನ್ನು ಪುನರುಚ್ಚರಿಸಿದರು. ಈ ಯಾತ್ರೆಗಳ ಮೂಲಕ ಗ್ರಾಮಗಳ ಪುನರುಜ್ಜೀವನ, ಸ್ವಾವಲಂಬನೆ, ಶೂನ್ಯ ಬಜೆಟ್ ಕೃಷಿ ಮತ್ತು ಪ್ಲಾಂಟೇಶನ್ ಅಭಿಯಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಮೋದಿ ಹೇಳಿದ್ದಾರೆ. ಜೊತೆಗೆ ಬಿಜೆಪಿ ರಾಜ್ಯಸಭಾ ಸದಸ್ಯರು ತಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರೊಂದಿಗೆ ಮಾತನಾಡಬೇಕು. ನಾವು ಸಂಕಲ್ಪಯಾತ್ರೆಯಲ್ಲಿ ನೀಡಿದ ಭರವಸೆ ಭವಿಷ್ಯದ ಸಾಕಾರಗೊಳ್ಳುವುದು ಎಂದು ಪ್ರಧಾನಿ ತಿಳಿಸಿರುವುದಾಗಿ ಜೋಷಿ ತಿಳಿಸಿದ್ದಾರೆ.
ಪ್ರತಿ ಕ್ಷೇತ್ರಕ್ಕೆ 15-20 ಜನ ಸದಸ್ಯರ ಗುಂಪು ಮಾಡಿ ಪ್ರತಿ ಕ್ಷೇತ್ರದಲ್ಲಿ ದಿನಕ್ಕೆ 15 ಕಿ. ಮೀ ಪಾದಯಾತ್ರೆ ಮಾಡಲಾಗುವುದು ಎಂದರು. ಇನ್ನು ಈ ಸಂದರ್ಭದಲ್ಲಿ ಗಾಂಧಿ ಜಯಂತಿ ಆಚರಣೆ, ಸ್ವಾತಂತ್ರ್ಯ ಸಂಗ್ರಾಮ, ಗಿಡ ನೆಡುವ ಕಾರ್ಯಕ್ರಮ ನಡೆಯಲಿರುವುದು ಎಂದು ಜೋಶಿ ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…