ನವದೆಹಲಿ : ಮಹಾತ್ಮಾ ಗಾಂಧಿ 150 ನೇ ವರ್ಷದ ಅಂಗವಾಗಿ ಅಕ್ಟೋಬರ್ 2ರ ರಿಂದ ಅಕ್ಟೋಬರ್ 31ರ ವರೆಗೆ ಬಿಜೆಪಿ ಸಂಸದರು ತಮ್ಮ ಕ್ಷೇತ್ರಗಳಲ್ಲಿ 150 ಕಿ.ಮೀ. ಪಾದಯಾತ್ರೆಯನ್ನು ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮೋದಿಯವರ ಹೇಳಿಕೆಯನ್ನು ಪುನರುಚ್ಚರಿಸಿದರು. ಈ ಯಾತ್ರೆಗಳ ಮೂಲಕ ಗ್ರಾಮಗಳ ಪುನರುಜ್ಜೀವನ, ಸ್ವಾವಲಂಬನೆ, ಶೂನ್ಯ ಬಜೆಟ್ ಕೃಷಿ ಮತ್ತು ಪ್ಲಾಂಟೇಶನ್ ಅಭಿಯಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಮೋದಿ ಹೇಳಿದ್ದಾರೆ. ಜೊತೆಗೆ ಬಿಜೆಪಿ ರಾಜ್ಯಸಭಾ ಸದಸ್ಯರು ತಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರೊಂದಿಗೆ ಮಾತನಾಡಬೇಕು. ನಾವು ಸಂಕಲ್ಪಯಾತ್ರೆಯಲ್ಲಿ ನೀಡಿದ ಭರವಸೆ ಭವಿಷ್ಯದ ಸಾಕಾರಗೊಳ್ಳುವುದು ಎಂದು ಪ್ರಧಾನಿ ತಿಳಿಸಿರುವುದಾಗಿ ಜೋಷಿ ತಿಳಿಸಿದ್ದಾರೆ.
ಪ್ರತಿ ಕ್ಷೇತ್ರಕ್ಕೆ 15-20 ಜನ ಸದಸ್ಯರ ಗುಂಪು ಮಾಡಿ ಪ್ರತಿ ಕ್ಷೇತ್ರದಲ್ಲಿ ದಿನಕ್ಕೆ 15 ಕಿ. ಮೀ ಪಾದಯಾತ್ರೆ ಮಾಡಲಾಗುವುದು ಎಂದರು. ಇನ್ನು ಈ ಸಂದರ್ಭದಲ್ಲಿ ಗಾಂಧಿ ಜಯಂತಿ ಆಚರಣೆ, ಸ್ವಾತಂತ್ರ್ಯ ಸಂಗ್ರಾಮ, ಗಿಡ ನೆಡುವ ಕಾರ್ಯಕ್ರಮ ನಡೆಯಲಿರುವುದು ಎಂದು ಜೋಶಿ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…