ನವದೆಹಲಿ : ಮಹಾತ್ಮಾ ಗಾಂಧಿ 150 ನೇ ವರ್ಷದ ಅಂಗವಾಗಿ ಅಕ್ಟೋಬರ್ 2ರ ರಿಂದ ಅಕ್ಟೋಬರ್ 31ರ ವರೆಗೆ ಬಿಜೆಪಿ ಸಂಸದರು ತಮ್ಮ ಕ್ಷೇತ್ರಗಳಲ್ಲಿ 150 ಕಿ.ಮೀ. ಪಾದಯಾತ್ರೆಯನ್ನು ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮೋದಿಯವರ ಹೇಳಿಕೆಯನ್ನು ಪುನರುಚ್ಚರಿಸಿದರು. ಈ ಯಾತ್ರೆಗಳ ಮೂಲಕ ಗ್ರಾಮಗಳ ಪುನರುಜ್ಜೀವನ, ಸ್ವಾವಲಂಬನೆ, ಶೂನ್ಯ ಬಜೆಟ್ ಕೃಷಿ ಮತ್ತು ಪ್ಲಾಂಟೇಶನ್ ಅಭಿಯಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಮೋದಿ ಹೇಳಿದ್ದಾರೆ. ಜೊತೆಗೆ ಬಿಜೆಪಿ ರಾಜ್ಯಸಭಾ ಸದಸ್ಯರು ತಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರೊಂದಿಗೆ ಮಾತನಾಡಬೇಕು. ನಾವು ಸಂಕಲ್ಪಯಾತ್ರೆಯಲ್ಲಿ ನೀಡಿದ ಭರವಸೆ ಭವಿಷ್ಯದ ಸಾಕಾರಗೊಳ್ಳುವುದು ಎಂದು ಪ್ರಧಾನಿ ತಿಳಿಸಿರುವುದಾಗಿ ಜೋಷಿ ತಿಳಿಸಿದ್ದಾರೆ.
ಪ್ರತಿ ಕ್ಷೇತ್ರಕ್ಕೆ 15-20 ಜನ ಸದಸ್ಯರ ಗುಂಪು ಮಾಡಿ ಪ್ರತಿ ಕ್ಷೇತ್ರದಲ್ಲಿ ದಿನಕ್ಕೆ 15 ಕಿ. ಮೀ ಪಾದಯಾತ್ರೆ ಮಾಡಲಾಗುವುದು ಎಂದರು. ಇನ್ನು ಈ ಸಂದರ್ಭದಲ್ಲಿ ಗಾಂಧಿ ಜಯಂತಿ ಆಚರಣೆ, ಸ್ವಾತಂತ್ರ್ಯ ಸಂಗ್ರಾಮ, ಗಿಡ ನೆಡುವ ಕಾರ್ಯಕ್ರಮ ನಡೆಯಲಿರುವುದು ಎಂದು ಜೋಶಿ ಹೇಳಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…