ಅಲಿಗಡ: ಹುತಾತ್ಮರ ದಿನದಂದು (ಜನವರಿ 30) ಉತ್ತರ ಪ್ರದೇಶದಲ್ಲಿ ಮಹಾತ್ಮ ಗಾಂಧಿ ಹತ್ಯೆ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿ ವಿಕೃತಿ ಮೆರೆದಿದ್ದ ಘಟನೆ ರಾಷ್ಟ್ರದಾದ್ಯಂತ ಚರ್ಚೆಯಾಗುತ್ತಿದ್ಧಂತೆ, ಘಟನೆಯ ರೂವಾರಿ ಪೂಜಾ ಶಕುನ್ ಪಾಂಡೆ ನಾಪತ್ತೆಯಾಗಿದ್ದರು. ಮಂಗಳವಾರ ಅಲಿಗಡದಲ್ಲಿ ಅವರನ್ನು ಬಂಧಿಸಲಾಗಿದೆ.
ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮತ್ತು ಅವರ ತಂಡ, ಮಹಾತ್ಮ ಗಾಂಧಿ ಅವರ 71ನೇ ಪುಣ್ಯಸ್ಮರಣೆಯ ದಿನ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸುವ ಮೂಲಕ ಹತ್ಯೆ ಘಟನೆಯನ್ನು ಮರುಸೃಷ್ಟಿಸಲಾಗಿತ್ತು. ಬಲಪಂಥೀಯರ ಈ ಆಚರಣೆ ಸಂಬಂಧ ಉತ್ತರ ಪ್ರದೇಶ ಪೊಲೀಸರು 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ಇತರೆ ಮೂವರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಪೂಜಾ ಪತಿ ಅಶೋಕ್ ಪಾಂಡೆಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಸರಿಧಾರಿಯಾಗಿದ್ದ ಪೂಜಾ ಶಕುನ್ ಪಾಂಡೆ ಏರ್ ಪಿಸ್ತೂಲ್ ಮೂಲಕ ಗಾಂಧೀಜಿ ಚಿತ್ರಕ್ಕೆ ಗುಂಡು ಹಾರಿಸಿದ್ದು ಮತ್ತು ಗಾಂಧೀಜಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಚಿತ್ರಕ್ಕೆ ಮಾಲೆ ಹಾಕಿದ ವಿಡಿಯೊ, ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಪೂಜಾ ಮಾಡಿದ ಕೃತ್ಯದ ವಿರುದ್ಧ ಬಹಳಷ್ಟು ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಹಿಂದೂ ಮಹಾಸಭಾ ನಾಥೂರಾಮ್ ಗೋಡ್ಸೆ ಕಾರ್ಯವನ್ನು ದೇಶಭಕ್ತಿ ಎಂದೇ ಬಿಂಬಿಸಲು ಪ್ರಯತ್ನಿಸುತ್ತಿದ್ದು, 2015ರಲ್ಲಿ ಹಿಂದೂ ಮಹಾಸಭಾ ಮುಖಂಡ ಸ್ವಾಮಿ ಪ್ರಣವಾನಂದ ಗೋಡ್ಸೆಯ ಪ್ರತಿಮೆಗಳನ್ನು ಅನಾವರಣಗೊಳಿಸುವುದಾಗಿ ಘೋಷಿಸಿದ್ದರು. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಗೋಡ್ಸೆ ಪ್ರತಿಮೆ ಸ್ಥಾಪಿಸುವ ಯೋಜನೆ ಪ್ರಕಟಿಸಿದ್ದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…