ಅಲಿಗಡ: ಹುತಾತ್ಮರ ದಿನದಂದು (ಜನವರಿ 30) ಉತ್ತರ ಪ್ರದೇಶದಲ್ಲಿ ಮಹಾತ್ಮ ಗಾಂಧಿ ಹತ್ಯೆ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿ ವಿಕೃತಿ ಮೆರೆದಿದ್ದ ಘಟನೆ ರಾಷ್ಟ್ರದಾದ್ಯಂತ ಚರ್ಚೆಯಾಗುತ್ತಿದ್ಧಂತೆ, ಘಟನೆಯ ರೂವಾರಿ ಪೂಜಾ ಶಕುನ್ ಪಾಂಡೆ ನಾಪತ್ತೆಯಾಗಿದ್ದರು. ಮಂಗಳವಾರ ಅಲಿಗಡದಲ್ಲಿ ಅವರನ್ನು ಬಂಧಿಸಲಾಗಿದೆ.
ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮತ್ತು ಅವರ ತಂಡ, ಮಹಾತ್ಮ ಗಾಂಧಿ ಅವರ 71ನೇ ಪುಣ್ಯಸ್ಮರಣೆಯ ದಿನ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸುವ ಮೂಲಕ ಹತ್ಯೆ ಘಟನೆಯನ್ನು ಮರುಸೃಷ್ಟಿಸಲಾಗಿತ್ತು. ಬಲಪಂಥೀಯರ ಈ ಆಚರಣೆ ಸಂಬಂಧ ಉತ್ತರ ಪ್ರದೇಶ ಪೊಲೀಸರು 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ಇತರೆ ಮೂವರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಪೂಜಾ ಪತಿ ಅಶೋಕ್ ಪಾಂಡೆಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಸರಿಧಾರಿಯಾಗಿದ್ದ ಪೂಜಾ ಶಕುನ್ ಪಾಂಡೆ ಏರ್ ಪಿಸ್ತೂಲ್ ಮೂಲಕ ಗಾಂಧೀಜಿ ಚಿತ್ರಕ್ಕೆ ಗುಂಡು ಹಾರಿಸಿದ್ದು ಮತ್ತು ಗಾಂಧೀಜಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಚಿತ್ರಕ್ಕೆ ಮಾಲೆ ಹಾಕಿದ ವಿಡಿಯೊ, ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಪೂಜಾ ಮಾಡಿದ ಕೃತ್ಯದ ವಿರುದ್ಧ ಬಹಳಷ್ಟು ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಹಿಂದೂ ಮಹಾಸಭಾ ನಾಥೂರಾಮ್ ಗೋಡ್ಸೆ ಕಾರ್ಯವನ್ನು ದೇಶಭಕ್ತಿ ಎಂದೇ ಬಿಂಬಿಸಲು ಪ್ರಯತ್ನಿಸುತ್ತಿದ್ದು, 2015ರಲ್ಲಿ ಹಿಂದೂ ಮಹಾಸಭಾ ಮುಖಂಡ ಸ್ವಾಮಿ ಪ್ರಣವಾನಂದ ಗೋಡ್ಸೆಯ ಪ್ರತಿಮೆಗಳನ್ನು ಅನಾವರಣಗೊಳಿಸುವುದಾಗಿ ಘೋಷಿಸಿದ್ದರು. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಗೋಡ್ಸೆ ಪ್ರತಿಮೆ ಸ್ಥಾಪಿಸುವ ಯೋಜನೆ ಪ್ರಕಟಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…