ಪ್ರಯಾಗ್ ರಾಜ್: ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಬೇಕು, ಸುಭಾಶ್ಚಂದ್ರ ಬೋಸ್ ಅವರನ್ನು ದೇಶದ ಮೊದಲ ಪ್ರಧಾನಿ ಮಂತ್ರಿ ಎಂದು ಹೆಸರಿಸಬೇಕು ಹಾಗೂ ಮತಾಂತರ ಎಂಬುದು ದೇಶದ್ರೋಹ ಎಂದು ಪರಿಗಣಿಸಿ ಮರಣದಂಡನೆ ಶಿಕ್ಷೆ ವಿಧಿಸಬೇಕು.ಇದು ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿನ ಧರ್ಮ ಸಂಸತ್ ನ ಬೇಡಿಕೆಯಾಗಿದೆ.
ದೇಶಭಕ್ತ ಮುಸ್ಲಿಮರು ನಮ್ಮ ಕುಟುಂಬದ ಭಾಗವಾಗಿದ್ದು, ಹಿಂದೂ ಧರ್ಮಕ್ಕೆ ಮರಳುವ ಪ್ರಚಾರಾಂದೋಲನ (ಘರ್ ವಾಪ್ಸಿ) ಮುಂದುವರಿಯಬೇಕು ಎಂಬ ನಿರ್ಧಾರವನ್ನು ಧರ್ಮ ಸಂಸತ್ ನಲ್ಲಿ ಕೈಗೊಳ್ಳಲಾಗಿದೆ.
ಧರ್ಮ ಸಂಸತ್ ಸಮ್ಮೇಳನದ ಮುಖ್ಯ ಅತಿಥಿ, ಸುಮೇರು ಪೀಠಾಧೀಶ್ವರ್, ಜಗದ್ಗುರು ಸ್ವಾಮಿ ನರೇಂದ್ರನಂದ ಸರಸ್ವತಿ ಅವರು ಮಾತನಾಡಿ, ಕೇಂದ್ರ ಸರ್ಕಾರ ಹಿಂದೂ ದೇಶ ಎಂದು ಘೋಷಿಸದಿದ್ದಲ್ಲಿ, ಎಲ್ಲಾ ಹಿಂದೂಗಳು ದೇಶವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸುವಂತೆ ಕೇಂದ್ರಕ್ಕೆ ಪತ್ರ ಬರೆಯಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ :
ಇಸ್ಲಾಮಿಕ್ ಜಿಹಾದ್ ಇಡೀ ಜಗತ್ತಿಗೆ ದೊಡ್ಡ ಅಪಾಯಕಾರಿಯಾಗಿದೆ. ಇದನ್ನು ಮಟ್ಟಹಾಕಬೇಕಾಗಿದ್ದು, ಭಾರತ ಚೀನಾದ ನಿಯಮವನ್ನು ಅನುಸರಿಸುವ ಮೂಲಕ ಭಯೋತ್ಪಾದನೆಯನ್ನು ನಿಗ್ರಹಿಸಬೇಕಾಗಿದೆ ಎಂದು ನರೇಂದ್ರನಂದ ಸರಸ್ವತಿ ಹೇಳಿದರು.
ಮಹಾತ್ಮ ಗಾಂಧಿ ರಾಷ್ಟ್ರಪಿತ ಅಲ್ಲ, ರಾಷ್ಟ್ರಪುತ್ರ ಆಗಬಹುದೇ ಹೊರತು ರಾಷ್ಟ್ರಪಿತ ಆಗಲಾರರು ಎಂದ ಸ್ವಾಮಿ ನರೇಂದ್ರನಂದ, ಜವಾಹರಲಾಲ್ ನೆಹರು ದೇಶದ ಮೊದಲ ಪ್ರಧಾನಿ ಅಲ್ಲ, ದೇಶದ ಮೊದಲ ಪ್ರಧಾನಿ ಸುಭಾಶ್ಚಂದ್ರ ಬೋಸ್, ಅವರ ನಾಯಕತ್ವವನ್ನು ಜಗತ್ತಿನ ಹಲವಾರು ದೇಶಗಳು ಒಪ್ಪಿಕೊಂಡಿದೆ. ಇತಿಹಾಸಕಾರರ ತಪ್ಪು ಮಾಹಿತಿ ಇಂದು ಯುವಜನಾಂಗವನ್ನು ಗೊಂದಲಕ್ಕೆ ದೂಡಿದೆ ಎಂದು ತಿಳಿಸಿದರು.
ಇದನ್ನೂ ಓದಿ :
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…