ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸಡಿಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ ಎಂದರು.
ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ. ಡಿ.27 ರಂದು ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…