ನವದೆಹಲಿ,: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸ್ಮರಿಸಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, “ರಾಷ್ಟ್ರ ಪಿತಾಮಹ ಮಹಾತ್ಮ ಗಾಂಧಿ ಅವರಿಗೆ ನನ್ನ ವಿನಮ್ರ ಗೌರವ. ಅವರ ಶಾಂತಿ, ಅಹಿಂಸೆ, ಸರಳತೆ, ಸಾಧನೆಗೆ ಹಾಗೂ ನಮ್ರತೆಯ ಆದರ್ಶಗಳಿಗೆ ನಾವು ಬದ್ಧರಾಗಿರಬೇಕು. ಅವರ ಸತ್ಯ ಹಾಗೂ ಪ್ರೀತಿಯ ಮಾರ್ಗವನ್ನು ಅನುಸರಿಸಲು ನಾವು ನಿರ್ಧರಿಸೋಣ” ಎಂದಿದ್ದಾರೆ.
“ಬಾಪು ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಅವರ ಆದರ್ಶಗಳು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ. ಹುತಾತ್ಮರ ದಿನದಂದು ಭಾರತದ ಸ್ವಾತಂತ್ರ್ಯ ಮತ್ತು ಪ್ರತಿಯೊಬ್ಬ ಭಾರತೀಯರ ಯೋಗಕ್ಷೇಮಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡ ಎಲ್ಲ ಮಹಾನ್ ಮಹಿಳೆಯರು ಮತ್ತು ಪುರುಷರ ವೀರರ ತ್ಯಾಗವನ್ನು ನಾವು ಸ್ಮರಿಸೋಣ” ಎಂದು ಹೇಳಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, “ಸತ್ಯ, ಅಹಿಂಸೆಯ ಆದರ್ಶಗಳ ಸಾಕಾರ ಮೂರ್ತಿಯಂತಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪುಣ್ಯತಿಥಿಯಂದು ಅವರಿಗೆ ಭಕ್ತಿಪೂರ್ವಕ ಪ್ರಣಾಮಗಳು. ನಮ್ಮನ್ನು ಸದಾ ಎಚ್ಚರಿಸುವ ಗಾಂಧೀಜಿಯವರ ಜೀವನ, ಅವರ ನಡೆ ಮತ್ತು ನುಡಿಗಳ ಬೆಳಕಿನಲ್ಲಿ ಸಮೃದ್ಧ, ಸಶಕ್ತ ಭಾರತ ನಿರ್ಮಾಣದ ಹಾದಿಯಲ್ಲಿ ಮುನ್ನಡೆಯೋಣ” ಎಂದಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]